ಬ್ರೇಕಿಂಗ್ ನ್ಯೂಸ್
09-10-20 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 9: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೇಂದ್ರ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟಿಸಿದ ಪಂಜಾಬ್ ರೈತರನ್ನು ಪರೋಕ್ಷವಾಗಿ ಕಂಗನಾ ರಣಾವತ್ ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದರು. ಕಂಗನಾ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕದ ಹೈಕೋರ್ಟ್ ವಕೀಲ ರಮೇಶ್ ನಾಯಕ್, ತುಮಕೂರು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದರು.
ಅರ್ಜಿ ಕುರಿತು ಅ.5ರಂದು ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಿತ್ತು. ಶುಕ್ರವಾರ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದು, ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸಲು ತುಮಕೂರು ನಗರದ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಸೂಚಿಸಿದೆ.
‘ಸಿಎಎ ಕಾಯ್ದೆಯಿಂದ ಒಬ್ಬನ ನಾಗರಿಕತ್ವವೂ ಹೋಗಲಿಲ್ಲ. ಆದರೆ, ಇವರು ರಕ್ತದ ಕೋಡಿಯನ್ನೇ ಹರಿಸಿದರು. ಅದೇ ಭಯೋತ್ಪಾದಕರು ಈಗ ಪ್ರತಿಭಟಿಸುತ್ತಿದ್ದಾರೆ. ಮಲಗಿದವರನ್ನು ಎಬ್ಬಿಸಬಹುದು, ಆದರೆ ಮಲಗಿದ ರೀತಿ ನಟಿಸುವವರನ್ನು ಎಬ್ಬಿಸಲಾಗದು. ದಡ್ಡರಂತೆ ನಟಿಸುತ್ತಿರುವವರಿಗೆ ಏನು ಹೇಳಿದರೂ ಪ್ರಯೋಜನ ಇರಲ್ಲ ಎಂದು ಕಂಗನಾ ಟ್ವೀಟ್ ಮಾಡಿದ್ದರು.
ನಟಿ ಕಂಗನಾ ಟ್ವೀಟ್ಗೆ ನೆಟ್ಟಿಗರ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮತ್ತೊಂದು ಟ್ವೀಟ್ ಮಾಡಿದ್ದ ಕಂಗನಾ, ಪಪ್ಪು ಸೇನೆ ಸುಳ್ಳು ಸುದ್ದಿಗಳನ್ನು ಮುಂದಿಟ್ಟು ಗಲಾಟೆ ಎಬ್ಬಿಸುತ್ತಿದೆ. ನಾನು ರೈತರನ್ನು ಭಯೋತ್ಪಾದಕರು ಎಂದಿಲ್ಲ. ನಾನು ಹಾಗೆ ಹೇಳಿದ್ದಾಗಿ ಸಾಬೀತು ಪಡಿಸಿದರೆ ಕ್ಷಮೆ ಕೇಳುತ್ತೇನೆ ಎಂದು ಸವಾಲು ಹಾಕಿದ್ದರು.
The Tumakuru district court has ordered an FIR or first information report against actor Kangana Ranaut over her tweet in which she had slammed the protests against the Centre's farm laws.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm