ಬ್ರೇಕಿಂಗ್ ನ್ಯೂಸ್
            
                        10-10-20 10:53 am Headline Karnataka News Network ಕರ್ನಾಟಕ
            ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm