ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm