ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm