ಬ್ರೇಕಿಂಗ್ ನ್ಯೂಸ್
10-10-22 01:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಯನ್ನೂ ಇದೇ ವೇಳೆ ಪ್ರಧಾನಿ ನೇರವೇರಿಸಲಿದ್ದಾರೆ. ಆನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಸೆ.2ರಂದು ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಮುಂದೆ ಪ್ರತಿ ತಿಂಗಳು ರಾಜ್ಯಕ್ಕೆ ಆಗಮಿಸುವ ಸುಳಿವು ನೀಡಿದ್ದರು. ಅದರಂತೆ, ರಾಜ್ಯ ಬಿಜೆಪಿಯಿಂದ ಕಾರ್ಯಕ್ರಮ ಆಯೋಜಿಸಿದ್ದು ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ, ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮದಲ್ಲಿ ನಿರೀಕ್ಷಿತ ಜನರು ಸೇರದೇ ರಾಜ್ಯ ಬಿಜೆಪಿಗೆ ಮುಜುಗರ ಸೃಷ್ಟಿಯಾಗಿತ್ತು. ದೊಡ್ಡಬಳ್ಳಾಪುರದಲ್ಲಿ ಖಾಲಿ ಖಾಲಿ ಕುರ್ಚಿಗಳ ಮುಂದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಷಣ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಅದೇ ಕಾರಣಕ್ಕೆ ಬಿಜೆಪಿಯಿಂದ ರಾಜ್ಯದಲ್ಲಿ ಸರಣಿ ಜನಸ್ಪಂದನ ಏರ್ಪಡಿಸಿದ್ದನ್ನು ಸದ್ದಿಲ್ಲದೆ ಮುಂದಕ್ಕೆ ಹಾಕಲಾಗಿತ್ತು.
ಇದೇ ವೇಳೆ ಬಿಜೆಪಿ ಕಾರ್ಯದರ್ಶಿ ರವಿಕುಮಾರ್, ಅಕ್ಟೋಬರ್ 10 ರಂದು ಜನಸಂಕಲ್ಪ ಯಾತ್ರೆ ಆರಂಭಿಸಲಾಗುತ್ತದೆ. 30 ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ನಾನಾ ಕಸರತ್ತು ನಡೆಸುತ್ತಿದ್ದಾರೆ.
The second terminal of the Kempegowda International Airport (KIA) on the outskirts of Bengaluru will likely be inaugurated in November by Prime Minister Narendra Modi. As per reports, the Prime Minister has been invited to inaugurate the new terminal, however, The Hindu reported that the PMO (Prime Minister’s Office) has not yet responded. As per reports, PM Modi has also been invited to inaugurate the massive 108-ft statue of Kempe Gowda, hailed as the founder of Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm