ಬ್ರೇಕಿಂಗ್ ನ್ಯೂಸ್
16-10-22 01:45 pm HK News Desk ಕರ್ನಾಟಕ
ಮಡಿಕೇರಿ, ಅ.16 : ಜೆಡಿಎಸ್ ನಗರಸಭೆ ಸದಸ್ಯನೊಬ್ಬ ಹಿಂದುಗಳು ಹೆಚ್ಚಿರುವ ಮಡಿಕೇರಿಯ ವಿವಿಧ ಕಡೆಗಳಲ್ಲಿ ಬಾಂಬ್ ಹಾಕಬೇಕೆಂದು ಹೇಳಿರುವ ಆಡಿಯೋ ಲೀಕ್ ಆಗಿದ್ದು ಜಿಲ್ಲೆಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ದೇಶದಲ್ಲಿ ವಿದ್ರೋಹಿ ಚಟುವಟಿಕೆಗೆ ಸಂಚು ರೂಪಿಸಿದ ಆರೋಪದಲ್ಲಿ ಪಿಎಫ್ಐ ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಲಾಗಿತ್ತು. ಆದರೆ ಆರು ತಿಂಗಳ ಹಿಂದೆಯೇ (ಏಪ್ರಿಲ್ 25) ಮಡಿಕೇರಿ ನಗರಸಭೆ ಸದಸ್ಯ ಜೆಡಿಎಸ್ ಪಕ್ಷದ ಮುಸ್ತಫಾ ಎಂಬಾತ ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ಎಂಬವನ ಜೊತೆ ಮಾತನಾಡುತ್ತಿದ್ದಾಗ, ಮಡಿಕೇರಿ ನಗರಕ್ಕೆ ಬಾಂಬ್ ಹಾಕಬೇಕು. ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು. ನಮ್ಮವರು ಒಂದಷ್ಟು ಜನರು ಸತ್ತರೂ ಪರವಾಗಿಲ್ಲ ಎಂದು ಮಾತನಾಡಿರುವ ಆಡಿಯೋ ಲೀಕ್ ಆಗಿದ್ದು, ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ.
50ಕ್ಕೂ ಹೆಚ್ಚು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪೆಟ್ರೋಲ್ ಬಾಂಬ್ ಹಾಕಬೇಕು ಎಂದು ಮಲೆಯಾಳಂ ಭಾಷೆಯಲ್ಲಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕಾಗಿ 50 ಜನರ ತಂಡ ಕಟ್ಟಿ ತರಬೇತಿ ಮಾಡಬೇಕು. ಇದಕ್ಕೆ ಎಲ್ಲರೂ 50 ಸಾವಿರ, ಒಂದು ಲಕ್ಷ ಹಣ ಹೂಡಿಕೆ ಮಾಡಬೇಕು. ಅದನ್ನು ಬಳಸಿಕೊಂಡು ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ ಹಾಕಿಬಿಡೋದು. ಇಡೀ ಮಡಿಕೇರಿ ಟೌನ್ ಹೊತ್ತಿ ಉರಿಯಬೇಕು. ಮಡಿಕೇರಿ ಮಾತ್ರ ಅಲ್ಲ ಎಲ್ಲಾ ಕಡೆ ಹಾಕಬೇಕು. ಅವರೂ ಸಾಯಲಿ, ನಾವು ಸಾಯೋಣ. ಒಟ್ನಲ್ಲಿ ಅವರಿಗೆ ಭಯ ಹುಟ್ಟಬೇಕು. 50 ಜಾಗದಲ್ಲಿ ಬಾಂಬ್ ಹಾಕಬೇಕು. ಆಗ ಅವರ ಪಾರ್ಟಿ ಲೈಫ್ ಲಾಂಗ್ ಇರಲ್ಲ. ಬಿಜೆಪಿಯವರು ನಿಲ್ಲೋದಕ್ಕೂ ಹೆದರಬೇಕು. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸೋಲುತ್ತದೆ. ಆಗ ಇವರಿಗೆ ಗೊತ್ತಾಗುತ್ತದೆ. ಡಿಕೆ ಶಿವಕುಮಾರ್ ಮೈಂಡ್ ಹಿಂದುತ್ವದ್ದು ಸಿದ್ದರಾಮಯ್ಯ ಮೈಂಡ್ ಜಾತ್ಯಾತೀತ ಮೈಂಡ್. ಎರಡೂ ಒಂದೇ ಆಗಲು ಸಾಧ್ಯವಿಲ್ಲ ಎಂದು ಪರಸ್ಪರ ಮಾತನಾಡಿರುವ ಆಡಿಯೋ ಫೋನ್ನಲ್ಲಿ ರೆಕಾರ್ಡ್ ಆಗಿದೆ.
ಆಡಿಯೋ ಲೀಕ್ ಆಗಿದ್ದು ಹೇಗೆ ?
ಮಡಿಕೇರಿ ನಿವಾಸಿ ಶೇಷಪ್ಪ ರೈ ಎಂಬವರು ಮುಸ್ತಫಾ ಅವರಿಗೆ ಯಾವುದೋ ವ್ಯವಹಾರದ ವಿಷಯ ಮಾತನಾಡುವುದಕ್ಕೆ ಕರೆ ಮಾಡಿದ್ದಾರೆ. ಈ ವೇಳೆ ಮುಸ್ತಫಾ, ಶೇಷಪ್ಪ ರೈ ಅವರ ಫೋನ್ ಕಟ್ ಮಾಡುವ ಬದಲು, ಕನೆಕ್ಟ್ ಆಗಿರುವಾಗಲೇ ಆ ಫೋನನ್ನು ಜೇಬಿನಲ್ಲಿರಿಸಿಕೊಂಡು ತನ್ನ ಸ್ನೇಹಿತ ಅಬ್ದುಲ್ಲಾ ಜೊತೆಗೆ ಮಡಿಕೇರಿಗೆ ಬಾಂಬ್ ಹಾಕುವ ಬಗ್ಗೆ ಮಾತನಾಡಿದ್ದಾನೆ. ಆತನ ಮಾತುಗಳು ಮುಸ್ತಫಾಗೆ ಕರೆ ಮಾಡಿದ್ದ ಶೇಷಪ್ಪ ರೈ ಅವರ ಫೋನ್ನಲ್ಲಿ ಕಾಲ್ ರೆಕಾರ್ಡ್ ಆಗಿದೆ. ಇತ್ತೀಚೆಗೆ ಕಾಲ್ ರೆಕಾರ್ಡ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ ಬಾಂಬ್ ಹಾಕುವ ವಿಚಾರ ಬೆಳಕಿಗೆ ಬಂದಿದ್ದು ಶೇಷಪ್ಪ ರೈ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ್ದಾರೆ.
The Karnataka Police have arrested a corporator, who allegedly threatened to carry out bomb blasts in Madikeri city, police said on Sunday. Mustafa, a member of the Madikeri City Corporation, is attached to the JD(S) in Kodagu district.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm