ಬ್ರೇಕಿಂಗ್ ನ್ಯೂಸ್
16-10-22 01:45 pm HK News Desk ಕರ್ನಾಟಕ
ಮಡಿಕೇರಿ, ಅ.16 : ಜೆಡಿಎಸ್ ನಗರಸಭೆ ಸದಸ್ಯನೊಬ್ಬ ಹಿಂದುಗಳು ಹೆಚ್ಚಿರುವ ಮಡಿಕೇರಿಯ ವಿವಿಧ ಕಡೆಗಳಲ್ಲಿ ಬಾಂಬ್ ಹಾಕಬೇಕೆಂದು ಹೇಳಿರುವ ಆಡಿಯೋ ಲೀಕ್ ಆಗಿದ್ದು ಜಿಲ್ಲೆಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ದೇಶದಲ್ಲಿ ವಿದ್ರೋಹಿ ಚಟುವಟಿಕೆಗೆ ಸಂಚು ರೂಪಿಸಿದ ಆರೋಪದಲ್ಲಿ ಪಿಎಫ್ಐ ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಲಾಗಿತ್ತು. ಆದರೆ ಆರು ತಿಂಗಳ ಹಿಂದೆಯೇ (ಏಪ್ರಿಲ್ 25) ಮಡಿಕೇರಿ ನಗರಸಭೆ ಸದಸ್ಯ ಜೆಡಿಎಸ್ ಪಕ್ಷದ ಮುಸ್ತಫಾ ಎಂಬಾತ ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ಎಂಬವನ ಜೊತೆ ಮಾತನಾಡುತ್ತಿದ್ದಾಗ, ಮಡಿಕೇರಿ ನಗರಕ್ಕೆ ಬಾಂಬ್ ಹಾಕಬೇಕು. ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು. ನಮ್ಮವರು ಒಂದಷ್ಟು ಜನರು ಸತ್ತರೂ ಪರವಾಗಿಲ್ಲ ಎಂದು ಮಾತನಾಡಿರುವ ಆಡಿಯೋ ಲೀಕ್ ಆಗಿದ್ದು, ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ.
50ಕ್ಕೂ ಹೆಚ್ಚು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪೆಟ್ರೋಲ್ ಬಾಂಬ್ ಹಾಕಬೇಕು ಎಂದು ಮಲೆಯಾಳಂ ಭಾಷೆಯಲ್ಲಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕಾಗಿ 50 ಜನರ ತಂಡ ಕಟ್ಟಿ ತರಬೇತಿ ಮಾಡಬೇಕು. ಇದಕ್ಕೆ ಎಲ್ಲರೂ 50 ಸಾವಿರ, ಒಂದು ಲಕ್ಷ ಹಣ ಹೂಡಿಕೆ ಮಾಡಬೇಕು. ಅದನ್ನು ಬಳಸಿಕೊಂಡು ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ ಹಾಕಿಬಿಡೋದು. ಇಡೀ ಮಡಿಕೇರಿ ಟೌನ್ ಹೊತ್ತಿ ಉರಿಯಬೇಕು. ಮಡಿಕೇರಿ ಮಾತ್ರ ಅಲ್ಲ ಎಲ್ಲಾ ಕಡೆ ಹಾಕಬೇಕು. ಅವರೂ ಸಾಯಲಿ, ನಾವು ಸಾಯೋಣ. ಒಟ್ನಲ್ಲಿ ಅವರಿಗೆ ಭಯ ಹುಟ್ಟಬೇಕು. 50 ಜಾಗದಲ್ಲಿ ಬಾಂಬ್ ಹಾಕಬೇಕು. ಆಗ ಅವರ ಪಾರ್ಟಿ ಲೈಫ್ ಲಾಂಗ್ ಇರಲ್ಲ. ಬಿಜೆಪಿಯವರು ನಿಲ್ಲೋದಕ್ಕೂ ಹೆದರಬೇಕು. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸೋಲುತ್ತದೆ. ಆಗ ಇವರಿಗೆ ಗೊತ್ತಾಗುತ್ತದೆ. ಡಿಕೆ ಶಿವಕುಮಾರ್ ಮೈಂಡ್ ಹಿಂದುತ್ವದ್ದು ಸಿದ್ದರಾಮಯ್ಯ ಮೈಂಡ್ ಜಾತ್ಯಾತೀತ ಮೈಂಡ್. ಎರಡೂ ಒಂದೇ ಆಗಲು ಸಾಧ್ಯವಿಲ್ಲ ಎಂದು ಪರಸ್ಪರ ಮಾತನಾಡಿರುವ ಆಡಿಯೋ ಫೋನ್ನಲ್ಲಿ ರೆಕಾರ್ಡ್ ಆಗಿದೆ.
ಆಡಿಯೋ ಲೀಕ್ ಆಗಿದ್ದು ಹೇಗೆ ?
ಮಡಿಕೇರಿ ನಿವಾಸಿ ಶೇಷಪ್ಪ ರೈ ಎಂಬವರು ಮುಸ್ತಫಾ ಅವರಿಗೆ ಯಾವುದೋ ವ್ಯವಹಾರದ ವಿಷಯ ಮಾತನಾಡುವುದಕ್ಕೆ ಕರೆ ಮಾಡಿದ್ದಾರೆ. ಈ ವೇಳೆ ಮುಸ್ತಫಾ, ಶೇಷಪ್ಪ ರೈ ಅವರ ಫೋನ್ ಕಟ್ ಮಾಡುವ ಬದಲು, ಕನೆಕ್ಟ್ ಆಗಿರುವಾಗಲೇ ಆ ಫೋನನ್ನು ಜೇಬಿನಲ್ಲಿರಿಸಿಕೊಂಡು ತನ್ನ ಸ್ನೇಹಿತ ಅಬ್ದುಲ್ಲಾ ಜೊತೆಗೆ ಮಡಿಕೇರಿಗೆ ಬಾಂಬ್ ಹಾಕುವ ಬಗ್ಗೆ ಮಾತನಾಡಿದ್ದಾನೆ. ಆತನ ಮಾತುಗಳು ಮುಸ್ತಫಾಗೆ ಕರೆ ಮಾಡಿದ್ದ ಶೇಷಪ್ಪ ರೈ ಅವರ ಫೋನ್ನಲ್ಲಿ ಕಾಲ್ ರೆಕಾರ್ಡ್ ಆಗಿದೆ. ಇತ್ತೀಚೆಗೆ ಕಾಲ್ ರೆಕಾರ್ಡ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ ಬಾಂಬ್ ಹಾಕುವ ವಿಚಾರ ಬೆಳಕಿಗೆ ಬಂದಿದ್ದು ಶೇಷಪ್ಪ ರೈ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ್ದಾರೆ.
The Karnataka Police have arrested a corporator, who allegedly threatened to carry out bomb blasts in Madikeri city, police said on Sunday. Mustafa, a member of the Madikeri City Corporation, is attached to the JD(S) in Kodagu district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm