ಬ್ರೇಕಿಂಗ್ ನ್ಯೂಸ್
16-10-22 10:54 pm HK News Desk ಕರ್ನಾಟಕ
ಬಳ್ಳಾರಿ, ಅ.16 : ಎಐಸಿಸಿ ಮುಖಂಡ ರಾಹುಲ್ ಗಾಂಧಿ ಗಣಿನಾಡು ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಭಾನುವಾರ ಸಂಜೆ ಆಂಧ್ರಪ್ರದೇಶಕ್ಕೆ ಪ್ರವೇಶಿಸಿದ್ದು ಕರ್ನಾಟಕ ಯಾತ್ರೆ ಅಂತ್ಯಗೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆಗೆ ಹೆಜ್ಜೆ ಹಾಕಿದರು.

ಈ ನಡುವೆ, ಯಾತ್ರೆ ಮೋಕಾಕ್ಕೆ ತಲುಪಿದಾಗ ವಿದ್ಯುತ್ ಅವಘಡ ಸಂಭವಿಸಿದ್ದು ಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಗಲಿಬಿಲಿಗೆ ಒಳಗಾದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಅವಘಡದ ಕಾರಣ ರಾಹುಲ್ ಜೊತೆಗಿದ್ದ ಎಸ್ಪಿಜಿ ಸಿಬಂದಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ.



ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಸ್ಪಿಜಿ ಕ್ಲಿಯರೆನ್ಸ್ ಸಿಕ್ಕ ನಂತರ ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಸಂಜೆ ನಿಗದಿಯಾದಂತೆ 4.30ಕ್ಕೆ ಯಾತ್ರೆ ಆರಂಭಗೊಂಡ ವೇಳೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ರಾಹುಲ್ ಗಾಂಧಿ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಕೆಲವರು ಮುಗಿಬಿದ್ದರಾದರೂ ಎಸ್ಪಿಜಿ ಅವಕಾಶ ಕೊಡಲಿಲ್ಲ.


)

ಅ.17ರಂದು ಎಐಸಿಸಿ ಚುನಾವಣೆ ನಿಮಿತ್ತ ಪಾದಯಾತ್ರೆ ಇರುವುದಿಲ್ಲ. ಅ.19ರಿಂದ ಆಂಧ್ರಪ್ರದೇಶದ ಛತ್ರಗುಡಿಯಿಂದ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
The miles, smiles and trials as Bharat Jodo completes 1,000 km
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm