ಬ್ರೇಕಿಂಗ್ ನ್ಯೂಸ್
17-10-22 10:22 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದಲ್ಲಿ ಡಿಸಿಪಿ ಆಗಿರುವ ನಿಶಾ ಜೇಮ್ಸ್ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆದಿದೆ. 'ವಿ ಸಪೋರ್ಟ್ ಯೂ' ಎಂದು ಜನರು ಬೆಂಬಲಕ್ಕೆ ನಿಂತಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯ ಸಿಬಂದಿ ಆಡಳಿತ ವಿಭಾಗದ ಎಡಿಜಿಪಿಗೆ ನಿಶಾ ಜೇಮ್ಸ್ ವಿರುದ್ಧವೇ ದೂರು ನೀಡಿದ್ದಾರೆ ಎನ್ನುವ ಸುದ್ದಿ ಬೆನ್ನಲ್ಲೇ ಕೆಲವರು ನಿಶಾ ಪರವಾಗಿ ನಿಂತಿದ್ದಾರೆ.
ಕೆಲವರ ಪ್ರಕಾರ, ನಿಶಾ ಜೇಮ್ಸ್ ಬೆಂಗಳೂರು ಆಡಳಿತ ವಿಭಾಗದಲ್ಲಿ ಡಿಸಿಪಿಯಾಗಿದ್ದು ಎರಡು ವರ್ಷದಲ್ಲಿ ನಗರ ಪೊಲೀಸ್ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ವರ್ಗಾವಣೆಯಲ್ಲಿ ಪಾರದರ್ಶಕ ನಿಲುವು ಹೊಂದಿದ್ದ ನಿಶಾ ಜೇಮ್ಸ್ ಐದು ವರ್ಷ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರ ಬುಡ ಅಲ್ಲಾಡಿಸಿದ್ದರು. ಜೊತೆಗೆ ಗನ್ ಲೈಸೆನ್ಸ್ ಪರವಾನಗಿ ಹಾಗೂ ನವಿಕರಣದಲ್ಲಿದ್ದ ಲಂಚಗುಳಿತನಕ್ಕೆ ಬ್ರೇಕ್ ಹಾಕಿದ್ದರು. ಇದಕ್ಕಾಗಿ ನಿಶಾ ಜೇಮ್ಸ್ ವಿರುದ್ಧ ಕೆಲವು ವಿಕೃತ ಮನಸ್ಥಿತಿಯ ಎಸ್ ಡಿಎ ಹಾಗೂ ಎಫ್ಡಿಎ ಸಿಬ್ಬಂದಿ ಷಡ್ಯಂತ್ರ ನಡೆಸಿದ್ದಾರೆ ಎಂದು ಜಾಲತಾಣದಲ್ಲಿ ಬರೆದಿದ್ದಾರೆ.

ಡಿಸಿಪಿ ಆಡಳಿತ ವಿಭಾಗದಿಂದ ನಿಶಾ ಜೇಮ್ಸ್ ಅವರನ್ನು ಎತ್ತಂಗಡಿ ಮಾಡಿಸಲು ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ನಿಶಾ ಜೇಮ್ಸ್ ಒಬ್ಬ ಮಹಿಳಾ ಅಧಿಕಾರಿ ಅನ್ನುವುದನ್ನೂ ನೋಡದೆ ಚಾರಿತ್ರ್ಯ ಹರಣವನ್ನೂ ಮಾಡುತ್ತಿದ್ದಾರೆ. ನಿಶಾ ಜೇಮ್ಸ್ ಗೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಜೊತೆ ಸಂಬಂಧ ಕಟ್ಟಿ ಕೆಟ್ಟದಾಗಿ ಬರೆದು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎನ್ನಲಾದ ದೂರಿನ ಪ್ರತಿಯನ್ನೂ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
ಜೊತೆಗೆ ನಿಶಾ ಜೇಮ್ಸ್ ಪತಿಯ ಹೆಸರನ್ನ ಉಲ್ಲೇಖಿಸಿ ಸಂಸಾರದಲ್ಲಿ ಹುಳಿ ಹಿಂಡುವ ಕೆಲಸವನ್ನೂ ಕೆಲವರು ಮಾಡುತ್ತಿದ್ದಾರಂತೆ. ಹೀಗಾಗಿ ಪೊಲೀಸ್ ಇಲಾಖೆಯ ಒಳಗಿದ್ದವರೂ ಸೇರಿ ಸಾಮಾಜಿಕ ಜಾಲತಾಣದಲ್ಲಿ ನಿಶಾ ಜೇಮ್ಸ್ ಫೋಟೋ ಹಾಕಿ we support you madam ಎಂದು ಅಭಿಯಾನ ಶುರು ಮಾಡಿದ್ದಾರೆ.
We support IPS Nisha James campaign starts on social media after she was falsely alleged of giving mental torture to police staffs after a complaint was filed at the commissioners office in Bengaluru.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm