ಬ್ರೇಕಿಂಗ್ ನ್ಯೂಸ್
17-10-22 10:22 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದಲ್ಲಿ ಡಿಸಿಪಿ ಆಗಿರುವ ನಿಶಾ ಜೇಮ್ಸ್ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆದಿದೆ. 'ವಿ ಸಪೋರ್ಟ್ ಯೂ' ಎಂದು ಜನರು ಬೆಂಬಲಕ್ಕೆ ನಿಂತಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯ ಸಿಬಂದಿ ಆಡಳಿತ ವಿಭಾಗದ ಎಡಿಜಿಪಿಗೆ ನಿಶಾ ಜೇಮ್ಸ್ ವಿರುದ್ಧವೇ ದೂರು ನೀಡಿದ್ದಾರೆ ಎನ್ನುವ ಸುದ್ದಿ ಬೆನ್ನಲ್ಲೇ ಕೆಲವರು ನಿಶಾ ಪರವಾಗಿ ನಿಂತಿದ್ದಾರೆ.
ಕೆಲವರ ಪ್ರಕಾರ, ನಿಶಾ ಜೇಮ್ಸ್ ಬೆಂಗಳೂರು ಆಡಳಿತ ವಿಭಾಗದಲ್ಲಿ ಡಿಸಿಪಿಯಾಗಿದ್ದು ಎರಡು ವರ್ಷದಲ್ಲಿ ನಗರ ಪೊಲೀಸ್ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ವರ್ಗಾವಣೆಯಲ್ಲಿ ಪಾರದರ್ಶಕ ನಿಲುವು ಹೊಂದಿದ್ದ ನಿಶಾ ಜೇಮ್ಸ್ ಐದು ವರ್ಷ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರ ಬುಡ ಅಲ್ಲಾಡಿಸಿದ್ದರು. ಜೊತೆಗೆ ಗನ್ ಲೈಸೆನ್ಸ್ ಪರವಾನಗಿ ಹಾಗೂ ನವಿಕರಣದಲ್ಲಿದ್ದ ಲಂಚಗುಳಿತನಕ್ಕೆ ಬ್ರೇಕ್ ಹಾಕಿದ್ದರು. ಇದಕ್ಕಾಗಿ ನಿಶಾ ಜೇಮ್ಸ್ ವಿರುದ್ಧ ಕೆಲವು ವಿಕೃತ ಮನಸ್ಥಿತಿಯ ಎಸ್ ಡಿಎ ಹಾಗೂ ಎಫ್ಡಿಎ ಸಿಬ್ಬಂದಿ ಷಡ್ಯಂತ್ರ ನಡೆಸಿದ್ದಾರೆ ಎಂದು ಜಾಲತಾಣದಲ್ಲಿ ಬರೆದಿದ್ದಾರೆ.

ಡಿಸಿಪಿ ಆಡಳಿತ ವಿಭಾಗದಿಂದ ನಿಶಾ ಜೇಮ್ಸ್ ಅವರನ್ನು ಎತ್ತಂಗಡಿ ಮಾಡಿಸಲು ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ನಿಶಾ ಜೇಮ್ಸ್ ಒಬ್ಬ ಮಹಿಳಾ ಅಧಿಕಾರಿ ಅನ್ನುವುದನ್ನೂ ನೋಡದೆ ಚಾರಿತ್ರ್ಯ ಹರಣವನ್ನೂ ಮಾಡುತ್ತಿದ್ದಾರೆ. ನಿಶಾ ಜೇಮ್ಸ್ ಗೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಜೊತೆ ಸಂಬಂಧ ಕಟ್ಟಿ ಕೆಟ್ಟದಾಗಿ ಬರೆದು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎನ್ನಲಾದ ದೂರಿನ ಪ್ರತಿಯನ್ನೂ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
ಜೊತೆಗೆ ನಿಶಾ ಜೇಮ್ಸ್ ಪತಿಯ ಹೆಸರನ್ನ ಉಲ್ಲೇಖಿಸಿ ಸಂಸಾರದಲ್ಲಿ ಹುಳಿ ಹಿಂಡುವ ಕೆಲಸವನ್ನೂ ಕೆಲವರು ಮಾಡುತ್ತಿದ್ದಾರಂತೆ. ಹೀಗಾಗಿ ಪೊಲೀಸ್ ಇಲಾಖೆಯ ಒಳಗಿದ್ದವರೂ ಸೇರಿ ಸಾಮಾಜಿಕ ಜಾಲತಾಣದಲ್ಲಿ ನಿಶಾ ಜೇಮ್ಸ್ ಫೋಟೋ ಹಾಕಿ we support you madam ಎಂದು ಅಭಿಯಾನ ಶುರು ಮಾಡಿದ್ದಾರೆ.
We support IPS Nisha James campaign starts on social media after she was falsely alleged of giving mental torture to police staffs after a complaint was filed at the commissioners office in Bengaluru.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm