ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm