ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm