ಬ್ರೇಕಿಂಗ್ ನ್ಯೂಸ್
18-10-22 10:19 pm HK News Desk ಕರ್ನಾಟಕ
ಬಾಗಲಕೋಟೆ, ಅ.18 : ನಲ್ವತ್ತು ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತರ ಮೇಲೆ ಮಾಜಿ ಸಚಿವ ಈಶ್ವರಪ್ಪ ಕೆಂಡಾಮಂಡಲರಾಗಿ ಕಿಡಿಕಾರಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
40% ಅನ್ನೋದೆಲ್ಲ ಸುಳ್ಳು ಎಂದ ಈಶ್ವರಪ್ಪ ಅವರಲ್ಲಿ, ಹಾಗಾದ್ರೆ ಎಷ್ಟು ಪರ್ಸೆಂಟ್ ನಡಿತಾ ಇದೆ ಎನ್ನುವ ಪ್ರಶ್ನೆ ತೂರಲಾಯಿತು. ಇದಕ್ಕೆ ಸಿಡಿಮಿಡಿಗೊಂಡ, ಇದು ಮಾನ ಮರ್ಯಾದ ಇಲ್ಲದೇ ಇರೋರು ಕೇಳುವ ಪ್ರಶ್ನೆ. ಅವರಿಗಂತೂ(ಕೆಂಪಣ್ಣ) ಜ್ಞಾನ ಇಲ್ಲ. ನೀವು ಮೈಮೇಲೆ ಜ್ಞಾನ ಇಟ್ಟುಕೊಂಡು ಕೇಳಬೇಕು. ಅವರು (ಕೆಂಪಣ್ಣ) ಕಾಂಗ್ರೆಸ್ ನಿಂದ ದುಡ್ಡು ತಿಂದು ಹೇಳಿಕೆ ಕೊಡ್ತಿರೋದು. ಆರೋಪ ಮಾಡಬೇಕಾದ್ರೆ ದಾಖಲೆ ಇರಬೇಕು ಎಂದು ಈಶ್ವರಪ್ಪ ವಾದಿಸಿದರು.

2018 ರಲ್ಲಿ ನರೇಂದ್ರ ಮೋದಿ 10 ಶೇ. ಸರ್ಕಾರ ಎಂದಾಗ ಯಾವ ದಾಖಲೆ ಕೊಟ್ಟಿದ್ರಿ ಎನ್ನುವ ಪ್ರಶ್ನೆ ಕೇಳಲಾಯಿತು. ಇದಕ್ಕೆ ತಡಬಡಾಯಿಸಿದ ಈಶ್ವರಪ್ಪ, ಅದು ಮೋದಿ ಹತ್ರ ಏನು ದಾಖಲೆ ಇತ್ತು. ನೀವು ಅವರನ್ನ ಕೇಳಿ, ನನಗೇನು ಗೊತ್ತು...? ಎಂದರು. ಮತ್ತೆ ಆಗ ಚುನಾವಣೆ ಪ್ರಚಾರದಲ್ಲಿ 10% ಸರ್ಕಾರ ಅಂದಿದ್ದೇಕೆ ಎನ್ನುವ ಪ್ರಶ್ನೆಗೆ, ನಾನಂತೂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 10 ಶೇ. ಸರ್ಕಾರ ಎಂದೂ ಯಾವತ್ತು ಮಾತಾಡಿಲ್ಲ. ಕಾರಣ ನನಗೇನು ಆ ಬಗ್ಗೆ ಗೊತ್ತಿರಲಿಲ್ಲ ಎಂದರು.

ಈಗ ನನ್ನ ಮೇಲೆ ರಾಹುಲ್ ಗಾಂಧಿ ಸಹ ಯಾಕೆ ರಾಜೀನಾಮೆ ಕೊಟ್ರಿ ಅಂದಿದ್ದಾರೆ. ಮರ್ಯಾದೆ ಪ್ರಶ್ನೆ, ಹಾಗೆ ನಾನು ರಾಜೀನಾಮೆ ಕೊಟ್ಟೆ. ನಾನು ತನಿಖೆಯಲ್ಲಿ ನಿರ್ದೋಷಿ ಎಂದು ಗೊತ್ತಾದ ಮೇಲೂ ನನ್ನ ಹೆಸರೇ ಗೊತ್ತಿಲ್ಲದ ರಾಹುಲ್ ಗಾಂಧಿ ಕಡೆಯಿಂದ ಮಾತಾಡಿಸಿದ್ರು. ಆ ಕೆಂಪಣ್ಣನಿಗೆ ಈಗಲೂ ಹೇಳ್ತೇನೆ. ನಿಮ್ಮಕಡೆ ಒಬ್ಬ ಮಂತ್ರಿ ಬಗ್ಗೆ ದಾಖಲೆ ಇದ್ರೆ ಕೊಡಿ. ಸಂತೋಷ ಪಾಟೀಲ ಮೇಲೆ ನಾನು ಕೇಸ್ ಹಾಕಿದೆ. ಪಾಪ ಅವನು ಸುಸೈಡ್ ಮಾಡಿಕೊಂಡ. ನಾನೇನು ಮಾಡ್ಲಿ...? ಎಂದು ಪ್ರಶ್ನಿಸಿದರು.

ಮತ್ತೆ ದಾಖಲೆ ಇಲ್ಲದೆ ಸಿದ್ದರಾಮಯ್ಯ ಅವರನ್ನ ಜೈಲಿಗೆ ಹಾಕ್ತೇವೆ ಎಂದು ನಿಮ್ಮಅಧ್ಯಕ್ಷರು ಹೇಗೆ ಹೇಳ್ತಾರೆ ಎನ್ನುವ ಪ್ರಶ್ನೆಗೆ, ಅವರ ಬಳಿ ದಾಖಲೆ ಇವೆ. ಆ ಸ್ಥಿತಿ ಬರುತ್ತೆ.. ನಮ್ಮ ಅಧ್ಯಕ್ಷರು ಬುದ್ದಿವಂತ್ರು. ಒಂದೊಂದು ಪದ ಹೇಳಬೇಕಾದ್ರೂ ಕೇಸ್ ಸ್ಟಡಿ ಮಾಡ್ತಾರೆ ಎಂದು ಅಡಿಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ಹೇಳಿಕೆ ಕೊಟ್ಟು ಜಾಗ ಖಾಲಿ ಮಾಡಿದ್ದಾರೆ.
Eshwarappa becomes angry after a journalist asks a question on 40 percent commission in Bagalakot.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm