ಬ್ರೇಕಿಂಗ್ ನ್ಯೂಸ್
19-10-22 11:34 am HK News Desk ಕರ್ನಾಟಕ
ಚಿಕ್ಕಮಗಳೂರು, ಅ.19: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿರುವುದು ಪತ್ತೆಯಾಗಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ 900ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿರುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದು ಆತಂಕ ಮೂಡಿಸಿದೆ.
ಮೂಡಿಗೆರೆ, ಕಡೂರು, ಬೇಲೂರು ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ರೋಗದಿಂದಾಗಿ ಹಾಲು ಉತ್ಪಾದನೆಯ ಮೇಲೆ ಪರಿಣಾಮ ಎದುರಾಗಲಿದೆ. ಕಳೆದ ಜುಲೈ ತಿಂಗಳಲ್ಲಿಯೇ ದೇವನೂರು, ಬಿಸಿಲೇಹಳ್ಳಿ ಭಾಗದ ಕೆಲವೆಡೆ ರೋಗ ಕಾಣಿಸಿಕೊಂಡಿತ್ತು. ನಿಧಾನವಾಗಿ ವ್ಯಾಪಿಸಿದ ರೋಗ, ತಾಲ್ಲೂಕಿನಲ್ಲಿ 900ಕ್ಕೂ ಹೆಚ್ಚು ರಾಸುಗಳಿಗೆ ಹಬ್ಬಿದೆ. ಆದರೆ ಈವರೆಗೂ ತಾಲೂಕು ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ.
ಪ್ರಕರಣ ಹೆಚ್ಚುತ್ತಿದ್ದರೂ ರಾಜ್ಯ ಸರಕಾರದಿಂದ ಸೂಕ್ತ ಲಸಿಕೆ ಸರಬರಾಜಾಗಿಲ್ಲ. ಹೀಗಾಗಿ ಮೊದಲ ಹಂತದಲ್ಲಿ ತಾಲ್ಲೂಕು ಆಡಳಿತದಿಂದಲೇ 10,300 ಡೋಸ್ ಲಸಿಕೆಯನ್ನು ಖರೀದಿಸಲಾಗಿದೆ. ರೋಗ ಕಾಣಿಸಿಕೊಂಡ ಸ್ಥಳದಿಂದ ಸುತ್ತ ಮುತ್ತ ನಾಲ್ಕು ಕಿ.ಮೀ. ವ್ಯಾಪ್ತಿಯಲ್ಲಿ ಆರೋಗ್ಯವಂತ ಹಸುಗಳಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ರೋಗ ಪೀಡಿತ ದನಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಡೂರು ತಾಲೂಕು ವ್ಯಾಪ್ತಿಯ 32 ಹಳ್ಳಿಗಳಲ್ಲಿ 982 ಪ್ರಕರಣ ಪತ್ತೆಯಾಗಿದೆ. ಸದ್ಯ ರೋಗ ಪೀಡಿತ ರಾಸುಗಳು ಚಿಕಿತ್ಸೆಗೆ ಸ್ಪಂದಿಸುತ್ತಿವೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ರೋಗದಿಂದಾಗಿ ಎರಡು ಹಸುಗಳು ಮರಣ ಹೊಂದಿವೆ. ಎರಡನೇ ಹಂತದಲ್ಲಿ 20 ಸಾವಿರ ಡೋಸ್ ಲಸಿಕೆ ತರಿಸಲು ಸಿದ್ಧತೆ ನಡೆಸಲಾಗಿದೆ. ರೋಗ ಪೀಡಿತ ಹಸುಗಳ ಹಾಲು ಕುಡಿಯುವುದರಿಂದ ರೋಗ ಮಾನವನಿಗೆ ಹರಡುವುದಿಲ್ಲ. ರೋಗದ ಕಾರಣಕ್ಕೆ ಜನರು ಆತಂಕ ಪಡಬೇಕಾಗಿಲ್ಲ ಎಂದು ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆಲವೆಡೆ ರೋಗ ಕಾಣಿಸಿಕೊಂಡಿರುವ ಮಾಹಿತಿಯಿದ್ದು ಜಿಲ್ಲಾಡಳಿತ 20 ಸಾವಿರ ಡೋಸ್ ಲಸಿಕೆ ತರಿಸಿಕೊಂಡಿದೆ. ಈಗಾಗಲೇ ಲಸಿಕೆ ನೀಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ಮಂಗಳೂರಿನ ಪಶು ಇಲಾಖೆ ಅಧಿಕಾರಿಗಳು ನೀಡಿದ್ದಾರೆ.
Lumpy skin disease in cattle found in Chikkamagaluru, more than 900 cases found.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm