ಬ್ರೇಕಿಂಗ್ ನ್ಯೂಸ್
11-10-20 01:44 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 11: ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತಾಗಿದೆ ಶಿಕ್ಷಕರ ಸ್ಥಿತಿ. ಕೊರೊನಾದಿಂದ ಬೇರೆಲ್ಲರಿಗೆ ರಜೆ ನೀಡಿದ್ದರೆ ಶಿಕ್ಷಕರಿಗೆ ಯಾಕೆ ಶಿಕ್ಷೆ ಅಂತ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಶಿಕ್ಷಕರ ಪರ ಸರಣಿ ಟ್ವೀಟ್ ಮಾಡುವ ಮೂಲಕ ರಜೆ ನೀಡದ ಸರ್ಕಾರದ ವಿರುದ್ಧ ಎಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ".
"ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ" ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಈ ವರ್ಷದ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದಿದ್ದಾರೆ.

ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರ್ಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ.
ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರ್ಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು" ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದರು.
ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.
— H D Kumaraswamy (@hd_kumaraswamy) October 11, 2020
1/5
ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ,ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು.
— H D Kumaraswamy (@hd_kumaraswamy) October 11, 2020
ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು.
5/5
Former chief minister H D Kumaraswamy on Sunday, October 11 lashed out at the state government for demanding teachers to return to schools amid coronavirus pandemic and not approving them midterm holidays.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm