ಬ್ರೇಕಿಂಗ್ ನ್ಯೂಸ್
04-08-20 03:33 am Bangalore Correspondent ಕರ್ನಾಟಕ
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಕೊರೋನಾ ಟೆಸ್ಟ್ ನಡೆಸಲಾಗಿದ್ದು ಕೊರೋನಾ ಪಾಸಿಟಿವ್ ಬಂದಿದೆ.
15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರನ್ನು ರಾತ್ರಿ 3:30ರ ಸುಮಾರಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂತರ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಕೋವಿಡ್-19 ಪರೀಕ್ಷೆಗಾಗಿ ಸ್ಯಾಂಪಲ್ ಪಡೆಯಲಾಗಿದೆ. ಕೋವಿಡ್ ವರದಿ ಬಂದಿದ್ದು, ಕೊರೋನಾ ಸೋಂಕು ದೃಢಪಟ್ಟಿದೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
— Siddaramaiah (@siddaramaiah) August 4, 2020
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ಈ ಬಗ್ಗೆ ಸಿದ್ದರಾಮಯ್ಯ ಇಂದು ಟ್ವೀಟ್ ಮಾಡಿದ್ದು, ನನ್ನ ಕೊರೋನಾ ತಪಾಸಣೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳು ಇಲ್ಲದೇ ಇದ್ದರೂ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ. ನನ್ನ ಸಂಪರ್ಕದಲ್ಲಿದವದರು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm