ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm