ಬ್ರೇಕಿಂಗ್ ನ್ಯೂಸ್
24-10-22 01:07 pm HK News Desk ಕರ್ನಾಟಕ
ರಾಮನಗರ, ಅ.24: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದು ಮರ್ಯಾದೆಗೆ ಅಂಜಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದಲ್ಲಿಯೇ ಕಿಟಕಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಡೆತ್ ನೋಟ್ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ. ಮಾಗಡಿ ತಾಲೂಕಿನಲ್ಲೇ ಲಿಂಗಾಯತರ ಪಾಲಿಗೆ ಅತ್ಯಂತ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50 ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಆಸ್ತಿಗಳಿವೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿಬಂದಿದ್ದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.
ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದೆ. 25 ವರ್ಷಗಳ ಹಿಂದೆ ಬಂಡೆಮಠದಲ್ಲಿ ಪೀಠ ಅಲಂಕರಿಸಿದ್ದರು. ಇತ್ತೀಚೆಗೆ ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದರು. ಶ್ರೀಗಳು ಬಂಡೇಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಆಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ.
ಶ್ರೀಗಳು ಮಠದಲ್ಲಿ ನೂತನ ಕಟ್ಟಡದ ಗುದ್ದಲಿ ಪೂಜೆಗೆ ಪ್ಲಾನ್ ಮಾಡಿಕೊಂಡಿದ್ದರು. ಮಠದ ಕಟ್ಟಡಕ್ಕೆ ಸರ್ಕಾರದಿಂದ ಹಣ ಸಹ ಮಂಜೂರಾತಿಯೂ ಆಗಿತ್ತು. ಇದೇ ಬುಧವಾರ 26 ರಂದು ಮಾಜಿ ಸಿಎಂ ಯಡಿಯೂರಪ್ಪನವರು ಗುದ್ದಲಿ ಪೂಜೆ ಮಾಡಬೇಕಿತ್ತು. ನೂತನ ಕಟ್ಟಡದ ಗುದ್ದಲಿ ಪೂಜೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಸ್ವಾಮೀಜಿ ಸಾವು ಕಂಡಿದ್ದಾರೆ.
Shri Kanchugal Bande Math Basavalinga Swamiji (45) of Kanchugal Bandemath ended his life in the math itself by hanging. The incident occurred at the Bandemath situated at Magadi taluk of the district. The exact reason for the extreme step taken by the seer is not known.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm