ಬ್ರೇಕಿಂಗ್ ನ್ಯೂಸ್
26-10-22 10:15 pm HK News Desk ಕರ್ನಾಟಕ
ಮೂಡುಬಿದ್ರೆ, ಅ.26 : ಹುಟ್ಟೂರಿಗೆ ಆಗಮಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ಮೂಡುಬಿದ್ರೆಯ ವಕೀಲರ ಭವನದ ಕಾಮಗಾರಿ ವೀಕ್ಷಣೆ ಮಾಡಿದ್ದು ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ತೋರಿಸಿ ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೂಡುಬಿದ್ರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣ ಹಂತದ ವಕೀಲರ ಭವನದ ಕಾಮಗಾರಿಯ ವೀಕ್ಷಣೆಗೆ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ, ಕಳಪೆ ಮತ್ತು ಅಸಮರ್ಪಕ ಕಾಮಗಾರಿಯನ್ನು ಕಂಡು ನ್ಯಾಯಾಧೀಶರು ಗರಂ ಆದರು. ನ್ಯಾಯಾಧೀಶರ ಆಗಮನದ ಬಗ್ಗೆ ಗುತ್ತಿಗೆದಾರರಿಗೆ ಪೂರ್ವ ಮಾಹಿತಿ ಇದ್ದರೂ ಹಾಜರಿರಲಿಲ್ಲ ಎನ್ನಲಾಗಿದೆ. ಕಳಪೆ ಗುಣಮಟ್ಟದ ಟೈಲ್ಸ್, ಅವೈಜ್ಞಾನಿಕ ಕಾಮಗಾರಿಯನ್ನು ಒಡೆದು ಬೇರೆಯದ್ದೇ ಟೈಲ್ಸ್ ಬಳಸಿ ಸರಿಪಡಿಸುವಂತೆ ಇಂಜಿನಿಯರ್ಗೆ ತಾಕೀತು ಮಾಡಿದ್ದಾರೆ.


ದನದ ಕೊಟ್ಟಿಗೆಗೆ ಬಳಸುವ ರೀತಿ ಸಾಮಾಗ್ರಿಗಳನ್ನು ಉಪಯೋಗ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ ನ್ಯಾಯಾಧೀಶ ಅಬ್ದುಲ್ ನಜೀರ್, ಗುತ್ತಿಗೆದಾರ ಬಿಮಲ್ ಪ್ರವೀಣ್ನನ್ನು ಕಪ್ಪು ಪಟ್ಟಿಗೆ ಸೇರಿಸಿ ಐದು ವರ್ಷ ಯಾವುದೇ ಗುತ್ತಿಗೆ ಕೊಡದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರಿಗೆ ಎಲ್ಲಾ ವಿಧದ ಪರಿಜ್ಞಾನವೂ ಇರುತ್ತದೆ. ನಮಗೆ ಸತ್ಯಾಂಶ ತಿಳಿಯಲು ಹೆಚ್ಚು ಸಮಯ ಬೇಕಾಗುವುದಿಲ್ಲ ಎಂದು ಪರೋಕ್ಷಾಗಿ ಕಿಡಿಕಾರಿದ್ದಾರೆ. ಕೊನೆ ಕ್ಷಣದಲ್ಲಿ ಗುತ್ತಿಗೆದಾರ ಆಗಮಿಸಿದ್ದು, ನನ್ನ ತವರೂರಿನಲ್ಲಿ ಈ ರೀತಿ ನಡೆದಿರುವುದರಿಂದ ನನ್ನ ಮನಸ್ಸಿಗೆ ಅತೀವ ನೋವಾಗಿದೆ ಎಂದ ಅವರು, ಗುತ್ತಿಗೆದಾರನ ಮುಖವನ್ನೂ ನೋಡದೆ ಹಿಂತಿರುಗಿದ್ದಾರೆ. ಜಿಲ್ಲಾ ಮುಖ್ಯ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
Supreme Court judge Abdul Nazeer surprise visit to Moodbidri Court, turns angry looking at improper work.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm