ಬ್ರೇಕಿಂಗ್ ನ್ಯೂಸ್
26-10-22 10:15 pm HK News Desk ಕರ್ನಾಟಕ
ಮೂಡುಬಿದ್ರೆ, ಅ.26 : ಹುಟ್ಟೂರಿಗೆ ಆಗಮಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ಮೂಡುಬಿದ್ರೆಯ ವಕೀಲರ ಭವನದ ಕಾಮಗಾರಿ ವೀಕ್ಷಣೆ ಮಾಡಿದ್ದು ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ತೋರಿಸಿ ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೂಡುಬಿದ್ರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣ ಹಂತದ ವಕೀಲರ ಭವನದ ಕಾಮಗಾರಿಯ ವೀಕ್ಷಣೆಗೆ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ, ಕಳಪೆ ಮತ್ತು ಅಸಮರ್ಪಕ ಕಾಮಗಾರಿಯನ್ನು ಕಂಡು ನ್ಯಾಯಾಧೀಶರು ಗರಂ ಆದರು. ನ್ಯಾಯಾಧೀಶರ ಆಗಮನದ ಬಗ್ಗೆ ಗುತ್ತಿಗೆದಾರರಿಗೆ ಪೂರ್ವ ಮಾಹಿತಿ ಇದ್ದರೂ ಹಾಜರಿರಲಿಲ್ಲ ಎನ್ನಲಾಗಿದೆ. ಕಳಪೆ ಗುಣಮಟ್ಟದ ಟೈಲ್ಸ್, ಅವೈಜ್ಞಾನಿಕ ಕಾಮಗಾರಿಯನ್ನು ಒಡೆದು ಬೇರೆಯದ್ದೇ ಟೈಲ್ಸ್ ಬಳಸಿ ಸರಿಪಡಿಸುವಂತೆ ಇಂಜಿನಿಯರ್ಗೆ ತಾಕೀತು ಮಾಡಿದ್ದಾರೆ.


ದನದ ಕೊಟ್ಟಿಗೆಗೆ ಬಳಸುವ ರೀತಿ ಸಾಮಾಗ್ರಿಗಳನ್ನು ಉಪಯೋಗ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ ನ್ಯಾಯಾಧೀಶ ಅಬ್ದುಲ್ ನಜೀರ್, ಗುತ್ತಿಗೆದಾರ ಬಿಮಲ್ ಪ್ರವೀಣ್ನನ್ನು ಕಪ್ಪು ಪಟ್ಟಿಗೆ ಸೇರಿಸಿ ಐದು ವರ್ಷ ಯಾವುದೇ ಗುತ್ತಿಗೆ ಕೊಡದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರಿಗೆ ಎಲ್ಲಾ ವಿಧದ ಪರಿಜ್ಞಾನವೂ ಇರುತ್ತದೆ. ನಮಗೆ ಸತ್ಯಾಂಶ ತಿಳಿಯಲು ಹೆಚ್ಚು ಸಮಯ ಬೇಕಾಗುವುದಿಲ್ಲ ಎಂದು ಪರೋಕ್ಷಾಗಿ ಕಿಡಿಕಾರಿದ್ದಾರೆ. ಕೊನೆ ಕ್ಷಣದಲ್ಲಿ ಗುತ್ತಿಗೆದಾರ ಆಗಮಿಸಿದ್ದು, ನನ್ನ ತವರೂರಿನಲ್ಲಿ ಈ ರೀತಿ ನಡೆದಿರುವುದರಿಂದ ನನ್ನ ಮನಸ್ಸಿಗೆ ಅತೀವ ನೋವಾಗಿದೆ ಎಂದ ಅವರು, ಗುತ್ತಿಗೆದಾರನ ಮುಖವನ್ನೂ ನೋಡದೆ ಹಿಂತಿರುಗಿದ್ದಾರೆ. ಜಿಲ್ಲಾ ಮುಖ್ಯ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
Supreme Court judge Abdul Nazeer surprise visit to Moodbidri Court, turns angry looking at improper work.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm