ಬ್ರೇಕಿಂಗ್ ನ್ಯೂಸ್
26-10-22 10:15 pm HK News Desk ಕರ್ನಾಟಕ
ಮೂಡುಬಿದ್ರೆ, ಅ.26 : ಹುಟ್ಟೂರಿಗೆ ಆಗಮಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ಮೂಡುಬಿದ್ರೆಯ ವಕೀಲರ ಭವನದ ಕಾಮಗಾರಿ ವೀಕ್ಷಣೆ ಮಾಡಿದ್ದು ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ತೋರಿಸಿ ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೂಡುಬಿದ್ರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣ ಹಂತದ ವಕೀಲರ ಭವನದ ಕಾಮಗಾರಿಯ ವೀಕ್ಷಣೆಗೆ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ, ಕಳಪೆ ಮತ್ತು ಅಸಮರ್ಪಕ ಕಾಮಗಾರಿಯನ್ನು ಕಂಡು ನ್ಯಾಯಾಧೀಶರು ಗರಂ ಆದರು. ನ್ಯಾಯಾಧೀಶರ ಆಗಮನದ ಬಗ್ಗೆ ಗುತ್ತಿಗೆದಾರರಿಗೆ ಪೂರ್ವ ಮಾಹಿತಿ ಇದ್ದರೂ ಹಾಜರಿರಲಿಲ್ಲ ಎನ್ನಲಾಗಿದೆ. ಕಳಪೆ ಗುಣಮಟ್ಟದ ಟೈಲ್ಸ್, ಅವೈಜ್ಞಾನಿಕ ಕಾಮಗಾರಿಯನ್ನು ಒಡೆದು ಬೇರೆಯದ್ದೇ ಟೈಲ್ಸ್ ಬಳಸಿ ಸರಿಪಡಿಸುವಂತೆ ಇಂಜಿನಿಯರ್ಗೆ ತಾಕೀತು ಮಾಡಿದ್ದಾರೆ.
ದನದ ಕೊಟ್ಟಿಗೆಗೆ ಬಳಸುವ ರೀತಿ ಸಾಮಾಗ್ರಿಗಳನ್ನು ಉಪಯೋಗ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ ನ್ಯಾಯಾಧೀಶ ಅಬ್ದುಲ್ ನಜೀರ್, ಗುತ್ತಿಗೆದಾರ ಬಿಮಲ್ ಪ್ರವೀಣ್ನನ್ನು ಕಪ್ಪು ಪಟ್ಟಿಗೆ ಸೇರಿಸಿ ಐದು ವರ್ಷ ಯಾವುದೇ ಗುತ್ತಿಗೆ ಕೊಡದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರಿಗೆ ಎಲ್ಲಾ ವಿಧದ ಪರಿಜ್ಞಾನವೂ ಇರುತ್ತದೆ. ನಮಗೆ ಸತ್ಯಾಂಶ ತಿಳಿಯಲು ಹೆಚ್ಚು ಸಮಯ ಬೇಕಾಗುವುದಿಲ್ಲ ಎಂದು ಪರೋಕ್ಷಾಗಿ ಕಿಡಿಕಾರಿದ್ದಾರೆ. ಕೊನೆ ಕ್ಷಣದಲ್ಲಿ ಗುತ್ತಿಗೆದಾರ ಆಗಮಿಸಿದ್ದು, ನನ್ನ ತವರೂರಿನಲ್ಲಿ ಈ ರೀತಿ ನಡೆದಿರುವುದರಿಂದ ನನ್ನ ಮನಸ್ಸಿಗೆ ಅತೀವ ನೋವಾಗಿದೆ ಎಂದ ಅವರು, ಗುತ್ತಿಗೆದಾರನ ಮುಖವನ್ನೂ ನೋಡದೆ ಹಿಂತಿರುಗಿದ್ದಾರೆ. ಜಿಲ್ಲಾ ಮುಖ್ಯ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
Supreme Court judge Abdul Nazeer surprise visit to Moodbidri Court, turns angry looking at improper work.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm