ಬ್ರೇಕಿಂಗ್ ನ್ಯೂಸ್
27-10-22 10:27 pm HK News Desk ಕರ್ನಾಟಕ
ಮಂಡ್ಯ, ಅ.27 : ಮಳವಳ್ಳಿಯ ಹತ್ತು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾಂತರಾಜು ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 638 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ತಂಡಕ್ಕೆ ಒಪ್ಪಿಸಲಾಗಿತ್ತು. ತುರ್ತಾಗಿ ವಿಚಾರಣೆ ನಡೆಸಿದ ಪೊಲೀಸರು ಕೇವಲ 15 ದಿನಗಳಲ್ಲೇ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ಕಾಂತರಾಜು ತಾನು ನಡೆಸುತ್ತಿದ್ದ ಟ್ಯೂಷನ್ ಸೆಂಟರಿಗೆ ಬಾಲಕಿಯನ್ನು ಬರುವಂತೆ ಹೇಳಿದ್ದ. ಆನಂತರ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದ. ಬಳಿಕ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ನೀರಿನ ಸಂಪಿಗೆ ಆಕೆಯ ಶವವನ್ನು ಎಸೆದು ಪರಾರಿಯಾಗಿದ್ದ.
ಈ ನಡುವೆ, ಬಾಲಕಿ ಶವ ಪತ್ತೆಯಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಕಿರಾತಕ ಆರೋಪಿ ಪೊಲೀಸರ ವಿಚಾರಣೆ ವೇಳೆಯೂ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಆದರೆ ಸೂಕ್ತ ದಾಖಲೆ ಮುಂದಿಟ್ಟು ತನಿಖೆ ನಡೆಸಿದಾಗ, ಆರೋಪಿ ಶಿಕ್ಷಕ ಸಿಕ್ಕಿಬಿದ್ದಿದ್ದ. ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ವಿಶೇಷ ಪೊಲೀಸರ ತಂಡ ಸಮಗ್ರ ತನಿಖೆ ನಡೆಸಿದ್ದು 15 ದಿನಗಳಲ್ಲೇ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ತಿಳಿಸಿದ್ದಾರೆ. ಪೊಲೀಸರ ಕಾರ್ಯವನ್ನು ಶ್ಲಾಘಿಸಿರುವ ಅಪರ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಡ್ಯ ಪೊಲೀಸ್ ಅಧಿಕಾರಿಗಳ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
Mandya student rape case, 638 pages of charge sheet filed by police in 15 days.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm