ಬ್ರೇಕಿಂಗ್ ನ್ಯೂಸ್
28-10-22 06:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.28: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ನಗರದಲ್ಲಿ ವಾಹನ ಸವಾರರಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ದಕ್ಷಿಣ ಭಾರತದ ಮೊದಲ 'ವಂದೇ ಭಾರತ್ ಎಕ್ಸ್ ಪ್ರೆಸ್' ರೈಲಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಮತ್ತು 5,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ.
ನವೆಂಬರ್ 11ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು. ಈ ವೇಳೆ ಮೋದಿಯವರು, ಸಿಎಂ ಬೊಮ್ಮಾಯಿ ಮತ್ತು ಇತರ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳಿಗೆ ತಮ್ಮ ಎಲ್ಲಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವ್ಯವಸ್ಥೆ ಮಾಡುವಂತೆ ಸೂಚಿಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನವೆಂಬರ್ 11ರಂದು ಬೆಳಗ್ಗೆ 10 ಗಂಟೆಗೆ ನಗರದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ. ರೈಲು ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಹಾಗೂ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಂಧ್ರ ಪ್ರದೇಶಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ವಿಮಾನ ನಿಲ್ದಾಣದ ಬಳಿ ಪ್ರಧಾನಿ ರ್ಯಾಲಿಯಲ್ಲಿ ಸುಮಾರು ಎರಡು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
Prime Minister Narendra Modi will lead the inaugural trips of South India’s first and fifth Vande Bharat Express trains on November 11 in Bengaluru. This will also be the State’s first Vande Bharat train, which is set to go to the Legislative Assembly elections scheduled for next year.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm