ಬ್ರೇಕಿಂಗ್ ನ್ಯೂಸ್
29-10-22 07:01 pm HK News Desk ಕರ್ನಾಟಕ
ಧಾರವಾಡ, ಅ.29: 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಮಂಗಳೂರು, ಉಡುಪಿ ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಬೆಳಗಾವಿ ನಗರದ ಎರಡು ಕ್ಷೇತ್ರ, ಬಾಗಲಕೋಟೆಯ ತೇರದಾಳ, ಜಮಖಂಡಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಪುತ್ತೂರು, ಚಿಕ್ಕಮಗಳೂರಿನ ಶೃಂಗೇರಿಯಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಂದು ಕ್ಷೇತ್ರದ ಬಗ್ಗೆ ನಿರ್ಣಯ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮುತಾಲಿಕ್ ಹೇಳಿದ್ದಾರೆ.

2014 ರಿಂದ ಬಿಜೆಪಿ ತನಗೆ ಟಿಕೇಟ್ ಕೊಡುತ್ತೆ ಎಂದು ಭಾವಿಸಿದ್ದೆ. ಬಿಜೆಪಿ ಪಕ್ಷವನ್ನು ಕಟ್ಟಿದವರು ನಾವು. ಆದರೆ ಬಿಜೆಪಿ ನನಗೆ ನಿರಂತರ ತೊಂದರೆ ಕೊಟ್ಟಿದೆ. ಹಿಂದುಗಳ ಹೆಸರಲ್ಲಿ ಗೆದ್ದು ಬಂದು ಅವರ ಮೇಲೆ ದೌರ್ಜನ್ಯಗಳನ್ನು ಎಸಗಿದೆ. ಇದಕ್ಕಾಗಿ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಕಟ್ಟರ್ ಹಿಂದುತ್ವವಾದಿ. ಚುನಾವಣೆಯಲ್ಲಿ ಗೆದ್ದರೆ, ನಾನು ಹಿಂದುತ್ವ ಪರ ಇರುವ ಬಿಜೆಪಿಗೆ ಬೆಂಬಲಿಸುತ್ತೇನೆ. ಆದರೆ ಬಿಜೆಪಿಗೆ ಹಿಂದುತ್ವ ಬೇಕಾಗಿಲ್ಲ.

ಬಿಜೆಪಿಯಲ್ಲಿ ಸದ್ಯ ಕಾಂಗ್ರೆಸ್ಸಿಗರೇ ತುಂಬಿದ್ದಾರೆ. ಹಿಂದುತ್ವದ ಹಿನ್ನೆಲೆ ಹೊಂದಿದವರಿಗೆ ಬಿಜೆಪಿಯಲ್ಲಿ ಮರ್ಯಾದೆ ಇಲ್ಲ. ಹೊಸ ಪಕ್ಷ ಮಾಡುವ ಗೋಜಿಗೆ ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧಿಸಲು ಹಿಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಡಿಸೆಂಬರ ಮೊದಲ ವಾರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅನ್ನೋದನ್ನ ಪ್ರಕಟಿಸುತ್ತೇನೆ ಎಂದು ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Pramod Muthalik all set to join politics, yet to choose constituency.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm