ಬ್ರೇಕಿಂಗ್ ನ್ಯೂಸ್
30-10-22 05:37 pm HK News Desk ಕರ್ನಾಟಕ
ಬೆಂಗಳೂರು, ಅ.30:ಕೆಆರ್ ಪುರಂ ಠಾಣೆಯ ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ನಂದೀಶ್ ಸಾವಿನ ಬಗ್ಗೆ ಆರೋಪಗಳು ಬಂದಿವೆ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ತನಿಖೆ ಕೈಗೊಳ್ಳುವುದರ ಬಗ್ಗೆ ಹಿಂದೆ ಮುಂದೆ ಯೋಚಿಸುವುದಿಲ್ಲ. ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸುತ್ತೇನೆ ಎಂದರು. ಇನ್ಸ್ ಪೆಕ್ಟರ್ ನಂದೀಶ್ ಬಿಜೆಪಿ ಭ್ರಷ್ಟಾಚಾರಕ್ಕೆ ಬಲಿಯಾಗಿದ್ದಾರೆಂದು ವಿಪಕ್ಷ ನಾಯಕರು ಆರೋಪಿಸಿದ್ದರು.
ಪತ್ರಕರ್ತರಿಗೆ ಉಡುಗೊರೆ ; ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ

ಪತ್ರಕರ್ತರಿಗೆ ಗಿಫ್ಟ್ ನೀಡಿರುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ಸಿನ ಟೂಲ್ ಕಿಟ್ ನಡೆಸುತ್ತಿರುವ ಭಾಗ ಇದು. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಯಾರಿಗೂ ಸೂಚನೆಯನ್ನು ನೀಡಿಲ್ಲ. ಕಾಂಗ್ರೆಸ್ ಇದ್ದಾಗ ಹಲವಾರು ಜನರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್, ಲ್ಯಾಪ್ಟಾಪ್, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲಾ ಪತ್ರಕರ್ತರು ಉಡುಗೊರೆಯನ್ನು ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಿನ್ನೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ವ್ಯಾಖ್ಯಾನ ಮಾಡಿದ್ದು ಅದನ್ನು ನಾನು ಖಂಡಿಸುತ್ತೇನೆ ಎಂದರು.
ಬಿಜೆಪಿಗೆ ಒಬಿಸಿ ಜನರ ಬೆಂಬಲ
ಓಬಿಸಿ ಸಮುದಾಯಗಳ ಜನರ ದೊಡ್ಡ ಪ್ರಮಾಣದ ಬೆಂಬಲ ಬಿಜೆಪಿಗೆ ಇದೆ. ಅದರ ಸಂಕೇತವಾಗಿ ಕಲಬುರಗಿಯಲ್ಲಿ ಬಿಜೆಪಿಯಿಂದ ಓಬಿಸಿ ಸಮಾವೇಶ ಆಯೋಜನೆಗೊಂಡಿದೆ. ನವೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶವಿದೆ. ನಂತರ ಪರಿಶಿಷ್ಟ ಜಾತಿಗಳ ಸಮಾವೇಶ ನಡೆಯಲಿದೆ. ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ನಡೆಯಲಿದ್ದು, ಡಿಸೆಂಬರ್ ತಿಂಗಳಲ್ಲಿ ಮಹಿಳೆಯರ ಸಮಾವೇಶ ಆಯೋಜನೆ ಮಾಡಲು ಪಕ್ಷದ ಅಧ್ಯಕ್ಷರು, ಕೋರ್ ಸಮಿತಿ ತೀರ್ಮಾನ ಮಾಡಿದೆ.
ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸಲಾಗಿದೆ. ಸುಮಾರು 2 ಲಕ್ಷ ಜನ ಸೇರಲಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಸೇರುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
Bangalore police Inspector Sandesh death cm Bommai orders for probe
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm