ಬ್ರೇಕಿಂಗ್ ನ್ಯೂಸ್
30-10-22 05:37 pm HK News Desk ಕರ್ನಾಟಕ
ಬೆಂಗಳೂರು, ಅ.30:ಕೆಆರ್ ಪುರಂ ಠಾಣೆಯ ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ನಂದೀಶ್ ಸಾವಿನ ಬಗ್ಗೆ ಆರೋಪಗಳು ಬಂದಿವೆ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ತನಿಖೆ ಕೈಗೊಳ್ಳುವುದರ ಬಗ್ಗೆ ಹಿಂದೆ ಮುಂದೆ ಯೋಚಿಸುವುದಿಲ್ಲ. ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸುತ್ತೇನೆ ಎಂದರು. ಇನ್ಸ್ ಪೆಕ್ಟರ್ ನಂದೀಶ್ ಬಿಜೆಪಿ ಭ್ರಷ್ಟಾಚಾರಕ್ಕೆ ಬಲಿಯಾಗಿದ್ದಾರೆಂದು ವಿಪಕ್ಷ ನಾಯಕರು ಆರೋಪಿಸಿದ್ದರು.
ಪತ್ರಕರ್ತರಿಗೆ ಉಡುಗೊರೆ ; ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ

ಪತ್ರಕರ್ತರಿಗೆ ಗಿಫ್ಟ್ ನೀಡಿರುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ಸಿನ ಟೂಲ್ ಕಿಟ್ ನಡೆಸುತ್ತಿರುವ ಭಾಗ ಇದು. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಯಾರಿಗೂ ಸೂಚನೆಯನ್ನು ನೀಡಿಲ್ಲ. ಕಾಂಗ್ರೆಸ್ ಇದ್ದಾಗ ಹಲವಾರು ಜನರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್, ಲ್ಯಾಪ್ಟಾಪ್, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲಾ ಪತ್ರಕರ್ತರು ಉಡುಗೊರೆಯನ್ನು ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಿನ್ನೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ವ್ಯಾಖ್ಯಾನ ಮಾಡಿದ್ದು ಅದನ್ನು ನಾನು ಖಂಡಿಸುತ್ತೇನೆ ಎಂದರು.
ಬಿಜೆಪಿಗೆ ಒಬಿಸಿ ಜನರ ಬೆಂಬಲ
ಓಬಿಸಿ ಸಮುದಾಯಗಳ ಜನರ ದೊಡ್ಡ ಪ್ರಮಾಣದ ಬೆಂಬಲ ಬಿಜೆಪಿಗೆ ಇದೆ. ಅದರ ಸಂಕೇತವಾಗಿ ಕಲಬುರಗಿಯಲ್ಲಿ ಬಿಜೆಪಿಯಿಂದ ಓಬಿಸಿ ಸಮಾವೇಶ ಆಯೋಜನೆಗೊಂಡಿದೆ. ನವೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶವಿದೆ. ನಂತರ ಪರಿಶಿಷ್ಟ ಜಾತಿಗಳ ಸಮಾವೇಶ ನಡೆಯಲಿದೆ. ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ನಡೆಯಲಿದ್ದು, ಡಿಸೆಂಬರ್ ತಿಂಗಳಲ್ಲಿ ಮಹಿಳೆಯರ ಸಮಾವೇಶ ಆಯೋಜನೆ ಮಾಡಲು ಪಕ್ಷದ ಅಧ್ಯಕ್ಷರು, ಕೋರ್ ಸಮಿತಿ ತೀರ್ಮಾನ ಮಾಡಿದೆ.
ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸಲಾಗಿದೆ. ಸುಮಾರು 2 ಲಕ್ಷ ಜನ ಸೇರಲಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಸೇರುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
Bangalore police Inspector Sandesh death cm Bommai orders for probe
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm