ಬ್ರೇಕಿಂಗ್ ನ್ಯೂಸ್
30-10-22 10:39 pm HK News Desk ಕರ್ನಾಟಕ
ಅಹ್ಮದಾಬಾದ್, ಅ.30:ಗುಜರಾತಿನ ಮೋರ್ಬಿ ನಗರದಲ್ಲಿ ತೂಗು ಸೇತುವೆ ಮುರಿದು ಬಿದ್ದು 60ಕ್ಕೂ ಹೆಚ್ಚು ಜನರು ಮೃತಪಟ್ಟ ದುರಂತ ನಡೆದಿದೆ. ಭಾನುವಾರ ಸಂಜೆ ಮುಚ್ಚು ನದಿಯ ಅಡ್ಡಲಾಗಿರುವ ಸೇತುವೆ ಕುಸಿದು ನೀರಿಗೆ ಬಿದ್ದಿದೆ.
ಸ್ಥಳೀಯ ಶಾಸಕ ಮತ್ತು ಗುಜರಾತ್ ಸರಕಾರದಲ್ಲಿ ಪಂಚಾಯತ್ ರಾಜ್ ಸಚಿವನಾಗಿರುವ ಬ್ರಿಜೇಶ್ ಮೆರ್ಜಾ ಸ್ಥಳಕ್ಕೆ ಆಗಮಿಸಿದ್ದು 60ಕ್ಕು ಹೆಚ್ಚು ಜನರು ಸಾವಿಗೀಡಾದ ಶಂಕೆ ವ್ಯಕ್ತಪಡಿಸಿದ್ದಾರೆ. ರಾಜಕೋಟ್ ಸಂಸದ ಮೋಹನ್ ಕುಂದರಿಯಾ, 60 ಶವಗಳನ್ನು ಪತ್ತೆ ಮಾಡಲಾಗಿದೆ ಎಂದಿದ್ದಾರೆ.
ಎನ್ ಡಿ ಆರ್ ಎಫ್ ಮತ್ತು ಇತರ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮೃತರಲ್ಲಿ ಹಲವರು ಪ್ರವಾಸಿಗರು ಆಗಿರುವ ಸಾಧ್ಯತೆಯಿದೆ ಎಂದು ಸ್ಥಳೀಯ ವಾಹಿನಿಗಳು ವರದಿಯ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಹಾರ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಭಾನುವಾರ ಸಂಜೆ 6.30ರ ವೇಳೆಗೆ ದುರಂತ ನಡೆದಿದೆ. ತೇಲುವ ಸೇತುವೆ ಎಂದು ಪ್ರಸಿದ್ಧಿ ಪಡೆದಿದ್ದ ಕಾರಣ ಟೂರಿಸ್ಟ್ ಸ್ಪಾಟ್ ಆಗಿತ್ತು. ಸೇತುವೆ ನೋಡುವುದಕ್ಕಾಗಿಯೇ ಜನರು ಬರುತ್ತಿದ್ದರು. ಘಟನೆ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಜನರಿದ್ದರು. ಇದರ ಭಾರದಿಂದಾಗಿ ಒಂದು ಪಾರ್ಶ್ವ ಕುಸಿದು ಬಿದ್ದಿದೆ ಎನ್ನಲಾಗಿದೆ. 79 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಆ ಪೈಕಿ 60 ಮಂದಿಯ ಸ್ಥಿತಿ ಗಂಭೀರ ಇದೆ. ಕೆಲವರು ನೀರಿನಲ್ಲಿ ಈಜಿ ದಡ ಸೇರುವುದು, ಅವರನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗಿದೆ.
At least 60 people have died after a cable bridge collapsed in Gujarat on Sunday evening, state minister Brijesh Merja said. The incident took place on the Machhu river in Morbi district.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm