ಬ್ರೇಕಿಂಗ್ ನ್ಯೂಸ್
02-11-22 08:34 pm Bangalore Correspondent ಕರ್ನಾಟಕ
ಬೆಂಗಳೂರು, ನ.2 : ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಅರ್ಜಿಗೆ 5 ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿಯ ಜೊತೆಗೆ ಸಾಮಾನ್ಯ ವರ್ಗಕ್ಕೆ ಸೇರಿದವರು 2 ಲಕ್ಷ ರೂ. ಡಿಡಿ ಹಾಗೂ ಕಾಂಗ್ರೆಸ್ ಸದಸ್ಯತ್ವ ವಿವರದ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50 ವಿನಾಯಿತಿ ನೀಡಲಾಗಿದೆ. ಟಿಕೆಟ್ ಆಕಾಂಕ್ಷಿಗಳು ನ.5 ರಿಂದ 15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಅರ್ಜಿಯ ಜತೆಗೆ ಸಂಗ್ರಹವಾಗುವ ಹಣವನ್ನು ಪಕ್ಷದ ಕಚೇರಿ, ಕಟ್ಟಡಗಳ ಕಾಮಗಾರಿಗೆ ಬಳಸಲಾಗುತ್ತದೆ ಎಂದು ಡಿಕೆಶಿ ತಿಳಿಸಿದರು.

ರಾಜ್ಯ ವಿಧಾನಸಭೆಗೆ 2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಹಾಕಲೇಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ ಎಂದು ವಿವರಿಸಿದರು.
ಅರ್ಜಿ ಹಾಕಲು ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಳಿಯೂ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ ಎಂದರು.
5 thousand fees mandatory for those newcomers contesting from congress says KPCC president DK shivakumar.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm