ಬ್ರೇಕಿಂಗ್ ನ್ಯೂಸ್
02-11-22 08:34 pm Bangalore Correspondent ಕರ್ನಾಟಕ
ಬೆಂಗಳೂರು, ನ.2 : ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಅರ್ಜಿಗೆ 5 ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿಯ ಜೊತೆಗೆ ಸಾಮಾನ್ಯ ವರ್ಗಕ್ಕೆ ಸೇರಿದವರು 2 ಲಕ್ಷ ರೂ. ಡಿಡಿ ಹಾಗೂ ಕಾಂಗ್ರೆಸ್ ಸದಸ್ಯತ್ವ ವಿವರದ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50 ವಿನಾಯಿತಿ ನೀಡಲಾಗಿದೆ. ಟಿಕೆಟ್ ಆಕಾಂಕ್ಷಿಗಳು ನ.5 ರಿಂದ 15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಅರ್ಜಿಯ ಜತೆಗೆ ಸಂಗ್ರಹವಾಗುವ ಹಣವನ್ನು ಪಕ್ಷದ ಕಚೇರಿ, ಕಟ್ಟಡಗಳ ಕಾಮಗಾರಿಗೆ ಬಳಸಲಾಗುತ್ತದೆ ಎಂದು ಡಿಕೆಶಿ ತಿಳಿಸಿದರು.

ರಾಜ್ಯ ವಿಧಾನಸಭೆಗೆ 2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಹಾಕಲೇಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ ಎಂದು ವಿವರಿಸಿದರು.
ಅರ್ಜಿ ಹಾಕಲು ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಳಿಯೂ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ ಎಂದರು.
5 thousand fees mandatory for those newcomers contesting from congress says KPCC president DK shivakumar.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm