ಬ್ರೇಕಿಂಗ್ ನ್ಯೂಸ್
06-11-22 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.6: ಮಂಗಳೂರಿನಲ್ಲಿ ನಾವು ಬಿಜೆಪಿಯನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಬಿಜೆಪಿ ಜಾತಿ, ಧರ್ಮಕ್ಕೆ ದ್ರೋಹ ಮಾಡಿದ್ದು, ಆಜಾನ್ ನೆಪದಲ್ಲಿ ಕೂಗೆಬ್ಬಿಸಲು ಹೋಗಿ 80 ಪರ್ಸೆಂಟ್ ಹಿಂದೂಗಳಿಗೆ ಮೋಸ ಮಾಡಿದ್ದಾರೆ. ಈಗ ರಾತ್ರಿ ವೇಳೆ ಗಣೇಶ ಹಬ್ಬ ಮಾಡೋಕ್ಕಾಗುತ್ತಾ ಎಂದು ಮಧು ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ, ಸಂಘ ಪರಿವಾರ ಹಾಗೂ ವಿ.ಎಚ್.ಪಿಯವರೇ ಮುಖ್ಯ ಪಾತ್ರಧಾರಿಗಳು. ಅಲ್ಲಿ ಪ್ರತಿ ಬಾರಿ ಬೆಂಕಿ ಹಚ್ಚುವವರು ಅವರೇ. ಆಜಾನ್ ಹೆಸರಲ್ಲಿ ಮುಸ್ಲಿಮರಿಗೆ ಮೋಸ ಮಾಡಿದ್ದು ಬಿಜೆಪಿಯವರು. ಆಜಾನ್ ಕೂಗಿನಿಂದ ಯಾರೂ ಹೃದಯಾಘಾತವಾಗಿ ಸತ್ತಿಲ್ಲ. ಯಾವತ್ತೋ ಕೋರ್ಟ್ ಆದೇಶ ಮಾಡಿತ್ತು. ಅದು ಜಾರಿಗೆ ಬಂದಿರಲಿಲ್ಲ. ಅದನ್ನು ಜಾರಿ ಮಾಡಲು ಹೋಗಿ ಹಿಂದುಗಳಿಗೂ ಮೋಸ ಮಾಡಿದ್ದಾರೆ ಎಂದರು.

ಹಿಂದೂಗಳಿಗೆ ಏಕೆ ಬಿಜೆಪಿ ಮೇಲೆ ಸಿಟ್ಟು, ದ್ವೇಷ ಅಂದರೆ, ಅವರದ್ದು ಆಫ್ ಮಾಡಿಸಲು ಹೋಗಿ ಹಿಂದೂಗಳ ಮೈಕ್ ಆಫ್ ಮಾಡಿಸಿದ್ದಾರೆ. ಜಾತಿ, ಧರ್ಮಕ್ಕೆ ದ್ರೋಹ ಮಾಡಿದವರು ಬಿಜೆಪಿಯವರು. ನಾನು ಹೇಳುವುದು ಇಷ್ಟೆ. ಮಂಗಳೂರಿನಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿರುವುದು ಒಂದೇ ಒಂದು ಸೀಟು. ಆದರೆ, ಈ ಬಾರಿ ಮಂಗಳೂರಿನಲ್ಲಿ ಬಿಜೆಪಿಯವರನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ. ನಾನು ಈಗ ಹೇಳಕ್ಕೋಗುವುದಿಲ್ಲ. ಚುನಾವಣೆ ಬಂದಾಗ ಗೊತ್ತಾಗುತ್ತದೆ ಎಂದು ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಏನಾಗಿತ್ತು. ಅಲ್ಲಿ ನಳಿನ್ ಕುಮಾರ್ ಕಾರಿನ ಟೈರ್ ಪಂಚರ್ ಮಾಡಿದ್ದು ಯಾರು? ಅಲ್ಲಿ ಕಾರನ್ನು ಅಲ್ಲಾಡಿಸಿದ್ದು ಯಾರು? ಇದೇ ಬಜರಂಗದಳ, ವಿಎಚ್ ಪಿಯವರು. ಬೇರೆ ಯಾರೂ ಅಲ್ಲ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯ ಮಾಡುತ್ತಿದ್ದಾರೆ ಅಂತ ಅವರಿಗೆ ಅರ್ಥ ಆಗಿದೆ. ಅದಕ್ಕಾಗಿ ಗೋ ಬ್ಯಾಕ್ ಸುನಿಲ್, ನಳಿನ್ ಅಂತ ಘೋಷಣೆ ಕೂಗಿದ್ದಾರೆ. ಆರೆಸ್ಸೆಸ್ ಮಂದಿಯೇ ಈ ಘೋಷಣೆ ಕೂಗಿದ್ದಾರೆ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯವನ್ನೇ ಮಾಡಿದ್ದು ಬೇರೇನೂ ಮಾಡಿಲ್ಲ. ಜನ ಪಾಠ ಕಲಿಸಲು ತಯಾರಾಗಿದ್ದಾರೆ ಎಂದರು.
See what will be the position of BJP in Mangalore in coming election challenges Madhu Bangarappa
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm