ಬ್ರೇಕಿಂಗ್ ನ್ಯೂಸ್
06-11-22 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.6: ಮಂಗಳೂರಿನಲ್ಲಿ ನಾವು ಬಿಜೆಪಿಯನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಬಿಜೆಪಿ ಜಾತಿ, ಧರ್ಮಕ್ಕೆ ದ್ರೋಹ ಮಾಡಿದ್ದು, ಆಜಾನ್ ನೆಪದಲ್ಲಿ ಕೂಗೆಬ್ಬಿಸಲು ಹೋಗಿ 80 ಪರ್ಸೆಂಟ್ ಹಿಂದೂಗಳಿಗೆ ಮೋಸ ಮಾಡಿದ್ದಾರೆ. ಈಗ ರಾತ್ರಿ ವೇಳೆ ಗಣೇಶ ಹಬ್ಬ ಮಾಡೋಕ್ಕಾಗುತ್ತಾ ಎಂದು ಮಧು ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ, ಸಂಘ ಪರಿವಾರ ಹಾಗೂ ವಿ.ಎಚ್.ಪಿಯವರೇ ಮುಖ್ಯ ಪಾತ್ರಧಾರಿಗಳು. ಅಲ್ಲಿ ಪ್ರತಿ ಬಾರಿ ಬೆಂಕಿ ಹಚ್ಚುವವರು ಅವರೇ. ಆಜಾನ್ ಹೆಸರಲ್ಲಿ ಮುಸ್ಲಿಮರಿಗೆ ಮೋಸ ಮಾಡಿದ್ದು ಬಿಜೆಪಿಯವರು. ಆಜಾನ್ ಕೂಗಿನಿಂದ ಯಾರೂ ಹೃದಯಾಘಾತವಾಗಿ ಸತ್ತಿಲ್ಲ. ಯಾವತ್ತೋ ಕೋರ್ಟ್ ಆದೇಶ ಮಾಡಿತ್ತು. ಅದು ಜಾರಿಗೆ ಬಂದಿರಲಿಲ್ಲ. ಅದನ್ನು ಜಾರಿ ಮಾಡಲು ಹೋಗಿ ಹಿಂದುಗಳಿಗೂ ಮೋಸ ಮಾಡಿದ್ದಾರೆ ಎಂದರು.

ಹಿಂದೂಗಳಿಗೆ ಏಕೆ ಬಿಜೆಪಿ ಮೇಲೆ ಸಿಟ್ಟು, ದ್ವೇಷ ಅಂದರೆ, ಅವರದ್ದು ಆಫ್ ಮಾಡಿಸಲು ಹೋಗಿ ಹಿಂದೂಗಳ ಮೈಕ್ ಆಫ್ ಮಾಡಿಸಿದ್ದಾರೆ. ಜಾತಿ, ಧರ್ಮಕ್ಕೆ ದ್ರೋಹ ಮಾಡಿದವರು ಬಿಜೆಪಿಯವರು. ನಾನು ಹೇಳುವುದು ಇಷ್ಟೆ. ಮಂಗಳೂರಿನಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿರುವುದು ಒಂದೇ ಒಂದು ಸೀಟು. ಆದರೆ, ಈ ಬಾರಿ ಮಂಗಳೂರಿನಲ್ಲಿ ಬಿಜೆಪಿಯವರನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ. ನಾನು ಈಗ ಹೇಳಕ್ಕೋಗುವುದಿಲ್ಲ. ಚುನಾವಣೆ ಬಂದಾಗ ಗೊತ್ತಾಗುತ್ತದೆ ಎಂದು ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಏನಾಗಿತ್ತು. ಅಲ್ಲಿ ನಳಿನ್ ಕುಮಾರ್ ಕಾರಿನ ಟೈರ್ ಪಂಚರ್ ಮಾಡಿದ್ದು ಯಾರು? ಅಲ್ಲಿ ಕಾರನ್ನು ಅಲ್ಲಾಡಿಸಿದ್ದು ಯಾರು? ಇದೇ ಬಜರಂಗದಳ, ವಿಎಚ್ ಪಿಯವರು. ಬೇರೆ ಯಾರೂ ಅಲ್ಲ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯ ಮಾಡುತ್ತಿದ್ದಾರೆ ಅಂತ ಅವರಿಗೆ ಅರ್ಥ ಆಗಿದೆ. ಅದಕ್ಕಾಗಿ ಗೋ ಬ್ಯಾಕ್ ಸುನಿಲ್, ನಳಿನ್ ಅಂತ ಘೋಷಣೆ ಕೂಗಿದ್ದಾರೆ. ಆರೆಸ್ಸೆಸ್ ಮಂದಿಯೇ ಈ ಘೋಷಣೆ ಕೂಗಿದ್ದಾರೆ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯವನ್ನೇ ಮಾಡಿದ್ದು ಬೇರೇನೂ ಮಾಡಿಲ್ಲ. ಜನ ಪಾಠ ಕಲಿಸಲು ತಯಾರಾಗಿದ್ದಾರೆ ಎಂದರು.
See what will be the position of BJP in Mangalore in coming election challenges Madhu Bangarappa
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm