ಬ್ರೇಕಿಂಗ್ ನ್ಯೂಸ್
07-11-22 11:03 pm HK News Desk ಕರ್ನಾಟಕ
ಚಿತ್ರದುರ್ಗ, ನ. 8 : ಮುರುಘಾ ಶರಣ ಸ್ವಾಮೀಜಿ ವಿರುದ್ಧ ಇಬ್ಬರು ಬಾಲಕಿಯರು ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.
ಅಕ್ಟೋಬರ್ 27ರಂದೇ ತನಿಖಾಧಿಕಾರಿ ಅನಿಲ್, ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ಶೀಟ್ನ ಸಿಸಿ ನಂಬರ್ ಬರುವುದು ಬಾಕಿಯಿದೆ. ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್ಪಿ ಪರಶುರಾಮ್ ಹೇಳಿದ್ದಾರೆ.
ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ – ಇವರಿಬ್ಬರ ವಿರುದ್ಧ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಬಳಿಕ ಅಂತಿಮ ಚಾರ್ಜ್ಶೀಟ್ ಸಲ್ಲಿಸುತ್ತೇವೆ ಎಂದವರು ಸ್ಪಷ್ಟಪಡಿಸಿದ್ದಾರೆ.

2ನೇ ಫೊಕ್ಸೋ ಪ್ರಕರಣ ತನಿಖೆ ನಡೆದಿದೆ
ಮುರುಘಾಶ್ರೀ ವಿರುದ್ಧ 2ನೇ ಫೊಕ್ಸೋ ಪ್ರಕರಣದಲ್ಲಿ ಸಂತ್ರಸ್ತರ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತರ ಪೋಷಕರ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ಎ1 ಮುರುಘಾಶ್ರೀ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತರ ಹೇಳಿಕೆ ಆಧರಿಸಿ ಕೆಲವು ಬಾಲಕಿಯರ ಹೇಳಿಕೆ ಪಡೆದಿದ್ದೇವೆ ಎಂದವರು ಹೇಳಿದ್ದಾರೆ.
15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ !
ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರನ್ನು ಕರೆಸಿ ಮಾಹಿತಿ ಕೇಳಿದ್ದೇವೆ. ಸಂತ್ರಸ್ತರ ಮಾಹಿತಿ ನೀಡಿದರೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದೇವೆ. ಒಡನಾಡಿ ಸಂಸ್ಥೆ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ತನಿಖೆ ನಡೆಸುವುದಾಗಿ ಮನವಿ ಮಾಡಿದ್ದೇವೆ. ಕೆಲ ಮಾಹಿತಿಯನ್ನು ಒಡನಾಡಿ ಸಂಸ್ಥೆಯವರು ನೀಡಿದ್ದಾರೆ. ಸಂತ್ರಸ್ತೆಯರ ಮಾಹಿತಿ ಸಿಕ್ಕರೆ ಖಂಡಿತ ತನಿಖೆ ನಡೆಸುತ್ತೇವೆ ಎಂದು ದುರ್ಗದ ಎಸ್ಪಿ ಹೇಳಿದರು.
ಮೊದಲ ಪ್ರಕರಣದ ಸಂತ್ರಸ್ತರು ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಆಗಿದೆ ಎಂದಿದ್ದರು. ಆದರೆ ಆಂಧ್ರ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಘಟಿಸಿದ್ದಾಗಿ ತಿಳಿದಿದೆ. ರೈಲಿನಿಂದ ಬಿದ್ದು ಸಾವನ್ನಪ್ಪಿರುವ ವರದಿ ಆಗಿದೆ. ಮಠದಲ್ಲಿ ಡ್ರಗ್ಸ್ ಬಳಕೆ ಆರೋಪ ವಿಚಾರ ಪ್ರಕರಣದ ತನಿಖೆ ನಡೆಯುತ್ತಿದೆ. ವೈದ್ಯಕೀಯ ಪರೀಕ್ಷೆಯ ಕೆಲ ವರದಿ ಬರಬೇಕಿದೆ ಎಂದವರು ಹೇಳಿದರು.
In a major development, Karnataka Police on Monday stated that the charges against rape accused, jailed Lingayat seer Shivamurthy Murugha Sharanaru have been held to stand during the course of investigation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm