ಬ್ರೇಕಿಂಗ್ ನ್ಯೂಸ್
09-11-22 10:16 pm Bangalore Correspondent ಕರ್ನಾಟಕ
ಬೆಂಗಳೂರು, ನ.9: ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಜಗತ್ತಿನ ಅತಿ ಎತ್ತರದ ಕಂಚಿನ ಪ್ರತಿಮೆ ಎಂದು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.
ಈ ಕುರಿತ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.
108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ. ಪ್ರಗತಿಯ ಪ್ರತಿಮೆ, ಬನ್ನಿನಾಡ ಕಟ್ಟೋಣ ಎಂದು ಟ್ವೀಟ್ ಮಾಡಿದ್ದಾರೆ.
ಪ್ರತಿಮೆ ವಿಶೇಷತೆಗಳು;
ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಗರ ನಿರ್ಮಾತೃ ಒಬ್ಬರ ವಿಶ್ವದ ಅತಿ ಎತ್ತರದ ಪ್ರತಿಮೆ ಇದು ಎಂಬ ಹೆಗ್ಗಳಿಕೆಗೆ ಪಡೆದಿದೆ. ಗುಜರಾತ್ನಲ್ಲಿ ಏಕತಾ ಪ್ರತಿಮೆ ನಿರ್ಮಾಣ ಮಾಡಿದ ರಾಮ್ ಸುತಾರ್ ಕ್ರಿಯೇಷನ್ಸ್ ಅವರೇ ಈ ಕೆಂಪೇಗೌಡ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ.
ಪ್ರತಿಮೆಯ ಖಡ್ಗವೇ 4 ಸಾವಿರ ಕೆಜಿ ತೂಕ ಹೊಂದಿದೆ. 120 ಟನ್ ಉಕ್ಕನ್ನು ಪ್ರತಿಮೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ. 98 ಟನ್ ಕಂಚನ್ನು ಬಳಕೆ ಮಾಡಲಾಗಿದೆ. ಈ ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದೆ.


ನವೆಂಬರ್ 11ರಂದು ನಡೆಯುವ ಕೆಂಪೇಗೌಡ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ವಿಡಿಯೋವೊಂದನ್ನು ಪ್ರದರ್ಶನ ಮಾಡಲಾಗುತ್ತಿದೆ. ಈ ವಿಡಿಯೋಗೆ ನಟ ಯಶ್ ಹಿನ್ನಲೆ ಧ್ವನಿ ನೀಡಿದ್ದಾರೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ.#ಪ್ರಗತಿಯಪ್ರತಿಮೆ #ಬನ್ನಿನಾಡಕಟ್ಟೋಣ pic.twitter.com/sFERth0Xwv
— Basavaraj S Bommai (@BSBommai) November 9, 2022
The 108 feet statue of Nadaprabhu Kempegowda, which Prime Minister Narendra Modi will unveil on Friday is the "first and tallest bronze statue of a founder of a city", as per 'World Book of Records'.Called the "Statue of Prosperity", it has been built to commemorate the contribution of Kempegowda, the founder of the city, towards the growth of Bengaluru."A matter of pride for us that the Statue of Prosperity is the first and tallest bronze statue of a founder of a city as per World Book of Records.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm