ಬ್ರೇಕಿಂಗ್ ನ್ಯೂಸ್
10-11-22 07:15 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನವರಿ ಒಂದರಿಂದಲೇ ಕುಚಲಕ್ಕಿ ಪಡಿತರ ಇಲಾಖೆಯಿಂದ ಪೂರೈಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಈ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಅಕ್ಕಿಯ ಅಗತ್ಯವಿದೆ ಎಂದು ಹೇಳಿದರು. ಇದಕ್ಕಾಗಿ ಡಿಸೆಂಬರ್ 1ರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ಭತ್ತ ಖರೀದಿಗೆ ತೊಡಗಲಾಗುವುದು. ಸ್ಥಳೀಯವಾಗಿ ಕೆಂಪಕ್ಕಿ ಭತ್ತ ಖರೀದಿಸಿ ಸಂಸ್ಕರಣೆ ಮಾಡಲಾಗುವುದು. ಇದಕ್ಕಾಗಿ ಭತ್ತ ಖರೀದಿ ಕೇಂದ್ರ ತೆರೆಯಲಿದ್ದು, 2540 ರೂ. ಬೆಂಬಲ ಬೆಲೆಗೆ ಭತ್ತ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ಐದು ಕಿಲೋ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿ ಸಿಗುವ ಕುಚಲಕ್ಕಿ ಪಡಿತರ ಇಲಾಖೆಯಿಂದ ನೀಡುವುದಕ್ಕೆ ಸಾಕಾಗದು. ಅದಕ್ಕಾಗಿ ಬೇರೆ ರಾಜ್ಯಗಳಿಂದಲೂ ಕುಚಲಕ್ಕಿ ಖರೀದಿ ಮಾಡಲಾಗುವುದು ಎಂದರು. ನಾವು ಊಟ ಮಾಡುವ ಅಕ್ಕಿಯನ್ನು ಪಡಿತರದಲ್ಲಿ ನೀಡಬೇಕೆಂದು ಕರಾವಳಿ ಜಿಲ್ಲೆಗಳ ಜನರು ಬೇಡಿಕೆ ಇರಿಸಿದ್ದರು. ನಾನಾ ಕಾರಣಗಳಿಂದ ಅಕ್ಕಿ ಪೂರೈಕೆ ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಕುಚಲಕ್ಕಿ ಬೇಡಿಕೆಗೆ ಒಪ್ಪಿಗೆ ನೀಡಿದ್ದು, ಕೂಡಲೇ ಭತ್ತ ಖರೀದಿಯನ್ನು ಮಾಡಲಾಗುವುದು. ಬೆಂಬಲ ಬೆಲೆ ಕೊಟ್ಟು ಭತ್ತ ಖರೀದಿಸಿ, ಸರಕಾರದ ಕಡೆಯಿಂದಲೇ ಸಂಸ್ಕರಿಸಿ ಪಡಿತರ ನೀಡಲಾಗುವುದು ಎಂದು ಹೇಳಿದರು.
ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 13 ಲಕ್ಷ ಕ್ವಿಂಟಾಲ್ ಭತ್ತ ಖರೀದಿಸುವ ಗುರಿಯಿದ್ದು, ಅದರಲ್ಲಿ 8.50 ಲಕ್ಷ ಕ್ವಿಂಟಾಲ್ ಅಕ್ಕಿ ಸಂಗ್ರಹದ ಅಂದಾಜಿದೆ. ಕೇಂದ್ರ ಸರಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದೇ ಇರುವುದರಿಂದ ಪ್ರತೀ ಕ್ವಿಂಟಾಲ್ ಗೆ 500 ರೂ. ಹೆಚ್ಚುವರಿ ಕೊಟ್ಟು ರಾಜ್ಯ ಸರಕಾರದಿಂದ ಖರೀದಿಸಲಾಗುವುದು. ಇದಕ್ಕೆ 132 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಕುರಿತು ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Boiled rice supply in Karvalai districts from Jan 1st 2023, 2450 per quintal.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm