ಬ್ರೇಕಿಂಗ್ ನ್ಯೂಸ್
10-11-22 07:15 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನವರಿ ಒಂದರಿಂದಲೇ ಕುಚಲಕ್ಕಿ ಪಡಿತರ ಇಲಾಖೆಯಿಂದ ಪೂರೈಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಈ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಅಕ್ಕಿಯ ಅಗತ್ಯವಿದೆ ಎಂದು ಹೇಳಿದರು. ಇದಕ್ಕಾಗಿ ಡಿಸೆಂಬರ್ 1ರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ಭತ್ತ ಖರೀದಿಗೆ ತೊಡಗಲಾಗುವುದು. ಸ್ಥಳೀಯವಾಗಿ ಕೆಂಪಕ್ಕಿ ಭತ್ತ ಖರೀದಿಸಿ ಸಂಸ್ಕರಣೆ ಮಾಡಲಾಗುವುದು. ಇದಕ್ಕಾಗಿ ಭತ್ತ ಖರೀದಿ ಕೇಂದ್ರ ತೆರೆಯಲಿದ್ದು, 2540 ರೂ. ಬೆಂಬಲ ಬೆಲೆಗೆ ಭತ್ತ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ಐದು ಕಿಲೋ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿ ಸಿಗುವ ಕುಚಲಕ್ಕಿ ಪಡಿತರ ಇಲಾಖೆಯಿಂದ ನೀಡುವುದಕ್ಕೆ ಸಾಕಾಗದು. ಅದಕ್ಕಾಗಿ ಬೇರೆ ರಾಜ್ಯಗಳಿಂದಲೂ ಕುಚಲಕ್ಕಿ ಖರೀದಿ ಮಾಡಲಾಗುವುದು ಎಂದರು. ನಾವು ಊಟ ಮಾಡುವ ಅಕ್ಕಿಯನ್ನು ಪಡಿತರದಲ್ಲಿ ನೀಡಬೇಕೆಂದು ಕರಾವಳಿ ಜಿಲ್ಲೆಗಳ ಜನರು ಬೇಡಿಕೆ ಇರಿಸಿದ್ದರು. ನಾನಾ ಕಾರಣಗಳಿಂದ ಅಕ್ಕಿ ಪೂರೈಕೆ ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಕುಚಲಕ್ಕಿ ಬೇಡಿಕೆಗೆ ಒಪ್ಪಿಗೆ ನೀಡಿದ್ದು, ಕೂಡಲೇ ಭತ್ತ ಖರೀದಿಯನ್ನು ಮಾಡಲಾಗುವುದು. ಬೆಂಬಲ ಬೆಲೆ ಕೊಟ್ಟು ಭತ್ತ ಖರೀದಿಸಿ, ಸರಕಾರದ ಕಡೆಯಿಂದಲೇ ಸಂಸ್ಕರಿಸಿ ಪಡಿತರ ನೀಡಲಾಗುವುದು ಎಂದು ಹೇಳಿದರು.
ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 13 ಲಕ್ಷ ಕ್ವಿಂಟಾಲ್ ಭತ್ತ ಖರೀದಿಸುವ ಗುರಿಯಿದ್ದು, ಅದರಲ್ಲಿ 8.50 ಲಕ್ಷ ಕ್ವಿಂಟಾಲ್ ಅಕ್ಕಿ ಸಂಗ್ರಹದ ಅಂದಾಜಿದೆ. ಕೇಂದ್ರ ಸರಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದೇ ಇರುವುದರಿಂದ ಪ್ರತೀ ಕ್ವಿಂಟಾಲ್ ಗೆ 500 ರೂ. ಹೆಚ್ಚುವರಿ ಕೊಟ್ಟು ರಾಜ್ಯ ಸರಕಾರದಿಂದ ಖರೀದಿಸಲಾಗುವುದು. ಇದಕ್ಕೆ 132 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಕುರಿತು ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Boiled rice supply in Karvalai districts from Jan 1st 2023, 2450 per quintal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm