ಬ್ರೇಕಿಂಗ್ ನ್ಯೂಸ್
10-11-22 07:15 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನವರಿ ಒಂದರಿಂದಲೇ ಕುಚಲಕ್ಕಿ ಪಡಿತರ ಇಲಾಖೆಯಿಂದ ಪೂರೈಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಈ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಅಕ್ಕಿಯ ಅಗತ್ಯವಿದೆ ಎಂದು ಹೇಳಿದರು. ಇದಕ್ಕಾಗಿ ಡಿಸೆಂಬರ್ 1ರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ಭತ್ತ ಖರೀದಿಗೆ ತೊಡಗಲಾಗುವುದು. ಸ್ಥಳೀಯವಾಗಿ ಕೆಂಪಕ್ಕಿ ಭತ್ತ ಖರೀದಿಸಿ ಸಂಸ್ಕರಣೆ ಮಾಡಲಾಗುವುದು. ಇದಕ್ಕಾಗಿ ಭತ್ತ ಖರೀದಿ ಕೇಂದ್ರ ತೆರೆಯಲಿದ್ದು, 2540 ರೂ. ಬೆಂಬಲ ಬೆಲೆಗೆ ಭತ್ತ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ಐದು ಕಿಲೋ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿ ಸಿಗುವ ಕುಚಲಕ್ಕಿ ಪಡಿತರ ಇಲಾಖೆಯಿಂದ ನೀಡುವುದಕ್ಕೆ ಸಾಕಾಗದು. ಅದಕ್ಕಾಗಿ ಬೇರೆ ರಾಜ್ಯಗಳಿಂದಲೂ ಕುಚಲಕ್ಕಿ ಖರೀದಿ ಮಾಡಲಾಗುವುದು ಎಂದರು. ನಾವು ಊಟ ಮಾಡುವ ಅಕ್ಕಿಯನ್ನು ಪಡಿತರದಲ್ಲಿ ನೀಡಬೇಕೆಂದು ಕರಾವಳಿ ಜಿಲ್ಲೆಗಳ ಜನರು ಬೇಡಿಕೆ ಇರಿಸಿದ್ದರು. ನಾನಾ ಕಾರಣಗಳಿಂದ ಅಕ್ಕಿ ಪೂರೈಕೆ ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಕುಚಲಕ್ಕಿ ಬೇಡಿಕೆಗೆ ಒಪ್ಪಿಗೆ ನೀಡಿದ್ದು, ಕೂಡಲೇ ಭತ್ತ ಖರೀದಿಯನ್ನು ಮಾಡಲಾಗುವುದು. ಬೆಂಬಲ ಬೆಲೆ ಕೊಟ್ಟು ಭತ್ತ ಖರೀದಿಸಿ, ಸರಕಾರದ ಕಡೆಯಿಂದಲೇ ಸಂಸ್ಕರಿಸಿ ಪಡಿತರ ನೀಡಲಾಗುವುದು ಎಂದು ಹೇಳಿದರು.
ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 13 ಲಕ್ಷ ಕ್ವಿಂಟಾಲ್ ಭತ್ತ ಖರೀದಿಸುವ ಗುರಿಯಿದ್ದು, ಅದರಲ್ಲಿ 8.50 ಲಕ್ಷ ಕ್ವಿಂಟಾಲ್ ಅಕ್ಕಿ ಸಂಗ್ರಹದ ಅಂದಾಜಿದೆ. ಕೇಂದ್ರ ಸರಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದೇ ಇರುವುದರಿಂದ ಪ್ರತೀ ಕ್ವಿಂಟಾಲ್ ಗೆ 500 ರೂ. ಹೆಚ್ಚುವರಿ ಕೊಟ್ಟು ರಾಜ್ಯ ಸರಕಾರದಿಂದ ಖರೀದಿಸಲಾಗುವುದು. ಇದಕ್ಕೆ 132 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಕುರಿತು ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Boiled rice supply in Karvalai districts from Jan 1st 2023, 2450 per quintal.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm