ಬ್ರೇಕಿಂಗ್ ನ್ಯೂಸ್
11-11-22 02:51 pm HK News Desk ಕರ್ನಾಟಕ
ಹುಬ್ಬಳ್ಳಿ, ನ.11 : ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ. ಅವನ ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಅಂಥವರ ಮೂರ್ತಿ ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.
![]()
ಸಾವಿರಾರು ಹಿಂದುಗಳ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿಗೆ ಈದ್ಗಾ ಮೈದಾನದಲ್ಲಿ ಆಚರಿಸಲು ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ ಎಂದರು.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ವಿಫಲವಾಗಿದೆ. ಆದರೆ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಿಸಲು ಅನುಮತಿ ನೀಡಬೇಕೆಂದು ಮುಂದಾಗಿದ್ದ ಸಂಘಟನೆಯಲ್ಲಿಯೇ ಒಡಕು ಉಂಟಾಗಿತ್ತು. ಅವರಲ್ಲಿದ್ದ ಬಹುತೇಕರು ಬಂದಿಲ್ಲ, ಮುಸ್ಲಿಮರು ಸಹ ಬಂದಿಲ್ಲ. ಒಟ್ಟಾರೆ ಟಿಪ್ಪು ಜಯಂತಿ ಆಚರಣೆ ವೈಫಲ್ಯ ಕಂಡಿದೆ ಎಂದರು.
ಹುಬ್ಬಳ್ಳಿ ನಗರಪಾಲಿಕೆಯ ವಿರೋಧ ಪಕ್ಷದ ನಾಯಕರು ಪಾಲಿಕೆ ಕಟ್ಟಡದಲ್ಲಿ ಟಿಪ್ಪು ಜಯಂತಿ ಆಚರಿಸಿದ್ದು ಸರಿಯಲ್ಲ. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಿಸಿರುವ ಅವರ ಮೇಲೆ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪೊಲೀಸ್ ದೂರು ನೀಡುತ್ತೇವೆ ಎಂದರು.
We will destroy tippus statue in case the government agrees to establish it slams Muthalik.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm