ಬ್ರೇಕಿಂಗ್ ನ್ಯೂಸ್
13-10-20 01:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್.13 : ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ಇಬ್ಬರು ಸಚಿವರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳೋಣ ಎಂದ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಭರವಸೆ ಹಿನ್ನೆಲೆ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ. ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು
ಇದೇ ವೇಳೆ ಮಾತನಾಡಿದ ಸುಧಾಕರ್, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm