ಬ್ರೇಕಿಂಗ್ ನ್ಯೂಸ್
            
                        13-10-20 01:00 pm Headline Karnataka News Network ಕರ್ನಾಟಕ
            ಬೆಂಗಳೂರು, ಅಕ್ಟೋಬರ್.13 : ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ಇಬ್ಬರು ಸಚಿವರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳೋಣ ಎಂದ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಭರವಸೆ ಹಿನ್ನೆಲೆ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ. ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು
ಇದೇ ವೇಳೆ ಮಾತನಾಡಿದ ಸುಧಾಕರ್, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm