ಬ್ರೇಕಿಂಗ್ ನ್ಯೂಸ್
13-10-20 01:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್.13 : ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ಇಬ್ಬರು ಸಚಿವರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳೋಣ ಎಂದ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಭರವಸೆ ಹಿನ್ನೆಲೆ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ. ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು
ಇದೇ ವೇಳೆ ಮಾತನಾಡಿದ ಸುಧಾಕರ್, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm