ಬ್ರೇಕಿಂಗ್ ನ್ಯೂಸ್
17-11-22 02:33 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.17 : ಕಾಂಗ್ರೆಸ್ ನಾಯಕಿ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮತ್ತು ಅವರ ಅಳಿಯನ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ. ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡರ ನಿವಾಸಕ್ಕೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ನುಗ್ಗಿದ್ದು ಶಾಕ್ ನೀಡಿದ್ದಾರೆ.
ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದರು. ವಾಹನದ ಮುಂಭಾಗದಲ್ಲಿ ಮದುವೆ ದಿಬ್ಬಣದ ಕಾರಿನಂತೆ ಶೃಂಗರಿಸಿ ಸಂಶಯ ಬಾರದಂತೆ ಮಾಡಲಾಗಿತ್ತು. ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ತೆರಳಿದ್ದು ತಪಾಸಣೆ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಮನೆಯಿದ್ದು ಅವರಿಗೆ ಸೇರಿದ ಕಲ್ಯಾಣ ಮಂಟಪದ ಮೇಲೂ ದಾಳಿ ನಡೆಸಲಾಗಿದೆ.



ಇದೇ ವೇಳೆ, ರಾಜ್ಯ ಸರ್ಕಾರ ಟಾರ್ಗೆಟ್ ಇಟ್ಟುಕೊಂಡು ಗಾಯಿತ್ರಿ ಶಾಂತೇಗೌಡರ ಮನೆಗೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ತೋರಿದ್ದಾರೆ. ಲೂಟಿ ರವಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಐಟಿ ಇಲಾಖೆಯನ್ನು ದುರಪಯೋಗ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.


ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡರ ನಿವಾಸ, ಕಚೇರಿ ಅಲ್ಲದೆ, ಗಾಯಿತ್ರಿ ಶಾಂತೇಗೌಡ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಮರ್ಲೆ ಕಲ್ಲಿನ ಕ್ರಷರ್ ಸ್ಥಳಕ್ಕೂ ದಾಳಿಯಾಗಿದೆ. ಇದಲ್ಲದೆ, ಬೆಂಗಳೂರಿನ ನಾಗರಬಾವಿಯಲ್ಲಿರುವ ಗಾಯತ್ರಿ ಶಾಂತೇಗೌಡ ನಿವಾಸಕ್ಕೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Gayathri Shante Gowda, the leader of the Congress, was the target of income tax raids at her Chikmanglur, Karnataka, home. She is regarded as Siddaramaiah's aide. Just before the Karnataka elections, I-T pressure is increasing on the Congress leader. Income Tax officers searched Gayathri Shante Gowda's home early this morning. She is a former Congresswoman and currently a member of the Congress party.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm