ಬ್ರೇಕಿಂಗ್ ನ್ಯೂಸ್
19-11-22 11:51 am Bangalore Correspondent ಕರ್ನಾಟಕ
ಬೆಂಗಳೂರು, ನ.19 : ತೆಲಂಗಾಣದಲ್ಲಿ ಟಿಆರ್ ಎಸ್ ಶಾಸಕರನ್ನು ಆಪರೇಷನ್ ಕಮಲಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧಿಸಿ ಬಿಜೆಪಿ ರಾಷ್ಟ್ರಿಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೆ ವಿಶೇಷ ಪೊಲೀಸ್ ತನಿಖಾ ತಂಡ ನೋಟಿಸ್ ಜಾರಿ ಮಾಡಿದೆ.
ತೆಲಂಗಾಣದಲ್ಲಿ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಆರೋಪಿಗಳು ಬಿಜೆಪಿ ಪ್ರಭಾವಿ ಮುಖಂಡ ಬಿ.ಎಲ್ ಸಂತೋಷ್ ಅವರ ಹೆಸರು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಎಸ್ಐಟಿ ತನಿಖಾ ತಂಡವು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಅಂದು ಬೆಳಗ್ಗೆ 10:30ಕ್ಕೆ ಹೈದರಾಬಾದ್ ಎಸ್ಐಟಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದು, ಒಂದು ವೇಳೆ ವಿಚಾರಣೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ. ಸಿಆರ್ ಪಿಸಿ ಸೆಕ್ಷನ್ 41 ಅಡಿ ನೋಟಿಸ್ ನೀಡಲಾಗಿದ್ದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ನೋಟಿಸ್ ರವಾನಿಸಲಾಗಿದೆ. ಅಲ್ಲದೆ, ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಮೊಬೈಲನ್ನು ಯಾವುದೇ ಕಾಲ್ ಡಿಟೈಲ್ ಡಿಲೀಟ್ ಮಾಡದೆ ತರುವಂತೆ ಸೂಚಿಸಲಾಗಿದೆ.
ತೆಲಂಗಾಣ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿ ಪಕ್ಷಕ್ಕೆ ಕರೆತರಲು ಸಂತೋಷ್ ಪ್ಲ್ಯಾನ್ ಮಾಡಿದ್ದು, ಒಬ್ಬ ಶಾಸಕರಿಗೆ ನೂರು ಕೋಟಿ ರೂ. ಆಮಿಷವೊಡ್ಡಿರುವ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದ್ದು ಹಲವರಿಗೆ ವಿಚಾರಣೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ.
In a major development in MLAs poaching case, the Special Investigation Team (SIT) of Telangana Police has summoned Bharatiya Janata Party (BJP) General Secretary (Organisation) BL Santhosh. The SIT has served notice to the BJP leader under Section 41A of the Criminal Procedure Code(CrPC) asking him to appear before it on Monday, November 21. Santhosh has been directed to go to the Police Command and Control Centre in Hyderabad at 10.30 am on Monday. The SIT has stated in the notice that if he fails to appear before it, he will be arrested.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm