ಬ್ರೇಕಿಂಗ್ ನ್ಯೂಸ್
19-11-22 10:58 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಮತದಾರರ ಮಾಹಿತಿ ಸಂಗ್ರಹ ಹಗರಣ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರ ನಡುವಿನ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿವೆ. ಕಾಂಗ್ರೆಸ್ ನ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡುತ್ತಲ್ಲೇ ಇದೆ.
ಕಾಂಗ್ರೆಸ್ ಪಕ್ಷಕ್ಕೆ ಇದು ತಿರುಗುಬಾಣವಾಗಲಿದೆ ಎಂಬ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ‘ತಿರುಗುಬಾಣವಲ್ಲ, ಈ ವಿಚಾರದಲ್ಲಿ ನಾವು ತಪ್ಪು ಮಾಡಿದ್ದರೆ ನೇಣು ಹಾಕಲಿ’ ಎಂದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಸಲ್ಲಿಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಈ ಮೊಕದ್ದಮೆ ಸಲ್ಲಿಸಲು ತಡ ಯಾಕೆ? ಕೂಡಲೇ ಸಲ್ಲಿಸಲಿ. ಈ ಕೇಸ್ ಎದುರಿಸುವುದು ಹೇಗೆ ಎಂದು ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಬಮ್ಮಾಯಿ ಅವರು ಹಾಗೂ ಅವರ ಹಿಂಬಾಲಕರಿಂದ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ. ಚಿಲುಮೆ ಈ ಅಕ್ರಮದ ಸಾಧನವಾಗಿದೆ. ಈ ವಿಚಾರವನ್ನು ನಾವು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಶ್ನಿಸುತ್ತೇವೆ. ಜನತಾ ನ್ಯಾಯಾಲಯದ ಮುಂದೆ ಇಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಕರಾಗಿ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯಲು ಅವಕಾಶ ನೀಡುವುದಿಲ್ಲ ಎಂದು ಸುರ್ಜೇವಾಲ ಅವರು ತಿಳಿಸಿದ್ದಾರೆ.
ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ‘ಈ ಸಮರದಲ್ಲಿ ಬೊಮ್ಮಾಯಿ ಅವರು ಸೋಲಲಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಮಾತ್ರವಲ್ಲ. ಅವರು ಜೈಲಿಗೂ ಹೋಗುತ್ತಾರೆ. ಹೀಗಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಬೇಕು. ಭಾಗಿಯಾಗಿರುವ ಇತರ ಎಲ್ಲ ಅಧಿಕಾರಿಗಳು ಬಂಧನವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಕರ್ನಾಟಕ ರಾಜ್ಯದ ಜನರ ಮೇಲೆ ನಂಬಿಕೆ ಇದೆ. ಬೊಮ್ಮಾಯಿ ಅವರ ಪ್ರಕಾರ ಈ ಆರೋಪ ನಿರಾಧಾರವಾಗಿದ್ದರೆ ತನಿಖೆಗೆ ಆದೇಶ ನೀಡಿದ್ದು ಯಾಕೆ?’ ಎಂದರು ಎಂದು ಪ್ರಶ್ನಿಸಿದ್ದಾರೆ.
Karnataka Pradesh Congress Committee president DK Shivakumar alleged that minister Ashwath Narayan and his team are behind the voter data theft case in Bengaluru, news agency ANI reported. DK Shivakumar alleged the minister's team even deleted lakhs of votes using illegally collected data.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm