ಬ್ರೇಕಿಂಗ್ ನ್ಯೂಸ್
26-11-22 02:05 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಹುಡುಗರಿಗೆ ಸೂಕ್ತ ಹುಡುಗಿ ಸಿಗುತ್ತಿಲ್ಲ ಎನ್ನುವ ಕೊರಗಿನ ಮಧ್ಯೆ ಇಲ್ಲೊಬ್ಬ ಯುವಕ ತನಗೆ ಮದುವೆಯಾಗಲು ಹೆಣ್ಣು ಹುಡುಕಿ ಕೊಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆದಿದ್ದಾನೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೀಗೆ ಪತ್ರ ಬರೆದಿದ್ದು, ಅದರ ಪ್ರತಿ ವೈರಲ್ ಆಗಿದೆ. ಭದ್ರಾವತಿ ತಾಲೂಕಿನ ಹೊಸಮನೆ ನಿವಾಸಿಯಾಗಿರುವ ಪ್ರವೀಣ್ ಹೀಗೆ ಪತ್ರ ಬರೆದಿರುವಾತ. ತೋಟಗಾರಿಕೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಸಣ್ಣಸಂಗಪ್ಪ ಅವರ ಪುತ್ರ ಪ್ರವೀಣ್ ಮದುವೆಗೆ ಹೆಣ್ಣು ಹುಡುಕಿ ಕೊಡುವಂತೆ ಎಸ್ಪಿಗೆ ಪತ್ರ ಬರೆದು ಸುದ್ದಿಯಾಗಿದ್ದಾನೆ.

ಈ ಹಿಂದೆ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದ ಪ್ರವೀಣ್ ಒ.ಎಸ್., ಸದ್ಯ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ನಡೆಸುತ್ತಿದ್ದಾನೆ. ಸಣ್ಣಸಂಗಪ್ಪ ಆಂಧ್ರ ಮೂಲದವರಾಗಿದ್ದು, ಸರಕಾರಿ ಸೇವೆಯಲ್ಲಿ ನಿವೃತ್ತರಾಗಿ ಶಿವಮೊಗ್ಗದಲ್ಲಿಯೇ ನೆಲೆಸಿದ್ದಾರೆ. ಆದರೆ ಕುಟುಂಬಸ್ಥರು ಆಂಧ್ರದಲ್ಲಿಯೇ ಇದ್ದು, ಹೆಚ್ಚು ಸಂಪರ್ಕದಲ್ಲಿ ಇಲ್ಲ ಎನ್ನಲಾಗುತ್ತಿದೆ. ಈ ನಡುವೆ, ಮಗ ಪ್ರವೀಣ್ ತನಗೊಂದು ಹೆಣ್ಣು ಹುಡುಕಿಕೊಡಿ ಎಂದು ಎಸ್ಪಿಗೆ ಪತ್ರ ಬರೆದಿದ್ದಾನೆ.
ಪ್ರವೀಣ್ ಪತ್ರವನ್ನು ನೋಡಿದ ಎಸ್ಪಿ ಮಿಥುನ್ ಕುಮಾರ್, ಈ ಬಗ್ಗೆ ಚೆಕ್ ಮಾಡುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನಿಜಕ್ಕೂ ಆತನಿಗೆ ಹೆಣ್ಣು ಸಿಗದೆ ಸಮಸ್ಯೆಗೀಡಾಗಿದ್ದಾನೆಯೇ ಅಥವಾ ಸುಮ್ಮನೆ ಪೊಲೀಸರಿಗೆ ಪತ್ರ ಬರೆದಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಸದ್ಯ ಪತ್ರ ಬರೆದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕೃಷಿ ಕೆಲಸ ನಡೆಸುವ ಮಂದಿಯನ್ನು ಕಲಿತ ಹುಡುಗಿಯರು ಮದುವೆಯಾಗುತ್ತಿಲ್ಲ ಎನ್ನುವ ಕೊರಗು ಒಂದೆಡೆಯಾಗಿದ್ದರೆ, ಕೆಲವರಿಗೆ ಸಂಬಂಧಿಕರನ್ನೆಲ್ಲ ಬಿಟ್ಟು ದೂರದಲ್ಲಿ ತನ್ನ ಪಾಡಿಗೆ ಕುಳಿತ ಕುಟುಂಬದ ವ್ಯಕ್ತಿಗಳಿಗೆ ಹೆಣ್ಣು ಸಿಗದೆ ಪರಿತಪಿಸುವಂತಾಗಿದೆ.
Man writes letter to SP of Shivamogga seeking help for good proposal for marriage.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm