ಬ್ರೇಕಿಂಗ್ ನ್ಯೂಸ್
26-11-22 02:05 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಹುಡುಗರಿಗೆ ಸೂಕ್ತ ಹುಡುಗಿ ಸಿಗುತ್ತಿಲ್ಲ ಎನ್ನುವ ಕೊರಗಿನ ಮಧ್ಯೆ ಇಲ್ಲೊಬ್ಬ ಯುವಕ ತನಗೆ ಮದುವೆಯಾಗಲು ಹೆಣ್ಣು ಹುಡುಕಿ ಕೊಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆದಿದ್ದಾನೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೀಗೆ ಪತ್ರ ಬರೆದಿದ್ದು, ಅದರ ಪ್ರತಿ ವೈರಲ್ ಆಗಿದೆ. ಭದ್ರಾವತಿ ತಾಲೂಕಿನ ಹೊಸಮನೆ ನಿವಾಸಿಯಾಗಿರುವ ಪ್ರವೀಣ್ ಹೀಗೆ ಪತ್ರ ಬರೆದಿರುವಾತ. ತೋಟಗಾರಿಕೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಸಣ್ಣಸಂಗಪ್ಪ ಅವರ ಪುತ್ರ ಪ್ರವೀಣ್ ಮದುವೆಗೆ ಹೆಣ್ಣು ಹುಡುಕಿ ಕೊಡುವಂತೆ ಎಸ್ಪಿಗೆ ಪತ್ರ ಬರೆದು ಸುದ್ದಿಯಾಗಿದ್ದಾನೆ.

ಈ ಹಿಂದೆ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದ ಪ್ರವೀಣ್ ಒ.ಎಸ್., ಸದ್ಯ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ನಡೆಸುತ್ತಿದ್ದಾನೆ. ಸಣ್ಣಸಂಗಪ್ಪ ಆಂಧ್ರ ಮೂಲದವರಾಗಿದ್ದು, ಸರಕಾರಿ ಸೇವೆಯಲ್ಲಿ ನಿವೃತ್ತರಾಗಿ ಶಿವಮೊಗ್ಗದಲ್ಲಿಯೇ ನೆಲೆಸಿದ್ದಾರೆ. ಆದರೆ ಕುಟುಂಬಸ್ಥರು ಆಂಧ್ರದಲ್ಲಿಯೇ ಇದ್ದು, ಹೆಚ್ಚು ಸಂಪರ್ಕದಲ್ಲಿ ಇಲ್ಲ ಎನ್ನಲಾಗುತ್ತಿದೆ. ಈ ನಡುವೆ, ಮಗ ಪ್ರವೀಣ್ ತನಗೊಂದು ಹೆಣ್ಣು ಹುಡುಕಿಕೊಡಿ ಎಂದು ಎಸ್ಪಿಗೆ ಪತ್ರ ಬರೆದಿದ್ದಾನೆ.
ಪ್ರವೀಣ್ ಪತ್ರವನ್ನು ನೋಡಿದ ಎಸ್ಪಿ ಮಿಥುನ್ ಕುಮಾರ್, ಈ ಬಗ್ಗೆ ಚೆಕ್ ಮಾಡುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನಿಜಕ್ಕೂ ಆತನಿಗೆ ಹೆಣ್ಣು ಸಿಗದೆ ಸಮಸ್ಯೆಗೀಡಾಗಿದ್ದಾನೆಯೇ ಅಥವಾ ಸುಮ್ಮನೆ ಪೊಲೀಸರಿಗೆ ಪತ್ರ ಬರೆದಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಸದ್ಯ ಪತ್ರ ಬರೆದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕೃಷಿ ಕೆಲಸ ನಡೆಸುವ ಮಂದಿಯನ್ನು ಕಲಿತ ಹುಡುಗಿಯರು ಮದುವೆಯಾಗುತ್ತಿಲ್ಲ ಎನ್ನುವ ಕೊರಗು ಒಂದೆಡೆಯಾಗಿದ್ದರೆ, ಕೆಲವರಿಗೆ ಸಂಬಂಧಿಕರನ್ನೆಲ್ಲ ಬಿಟ್ಟು ದೂರದಲ್ಲಿ ತನ್ನ ಪಾಡಿಗೆ ಕುಳಿತ ಕುಟುಂಬದ ವ್ಯಕ್ತಿಗಳಿಗೆ ಹೆಣ್ಣು ಸಿಗದೆ ಪರಿತಪಿಸುವಂತಾಗಿದೆ.
Man writes letter to SP of Shivamogga seeking help for good proposal for marriage.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm