ಬ್ರೇಕಿಂಗ್ ನ್ಯೂಸ್
30-11-22 11:38 am Bangalore Correspondent ಕರ್ನಾಟಕ
ಬೆಂಗಳೂರು, ನ.30: ಸಿಟಿ ಸಿವಿಲ್ ಕೋರ್ಟ್ನಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರ ವಿರುದ್ಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿರುವ ಹೈಕೋರ್ಟ್, ವಕೀಲರಿಗೆ 2 ಲಕ್ಷ ರೂ. ದಂಡ ವಿಧಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪ್ರಕರಣ ಸಂಬಂಧಿಸಿ ವಕೀಲ ಕೆ.ಎನ್. ಜಗದೀಶ್ ಬೇಷರತ್ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ್ಲಿಸಿದ್ದಲ್ಲದೆ, ನ್ಯಾಯಾಲಯದ ವಿಚಾರದಲ್ಲಿ ಭವಿಷ್ಯದಲ್ಲಿ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಕ್ಷಮಾಪಣಾ ಪತ್ರ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟಿದೆ.

ಆದರೆ, ನ್ಯಾಯಾಲದಲ್ಲಿ ಅನುಚಿತವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಅವರಿಗೆ 2 ಲಕ್ಷ ರೂ. ದಂಡ ವಿಧಿಸಿದ ನ್ಯಾಯಪೀಠ, 1 ಲಕ್ಷ ರೂ. ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ, 50 ಸಾವಿರ ರೂ. ವಕೀಲರ ಸಂಘದ ಗ್ರಂಥಾಲಯ ಅಭಿವೃದ್ಧಿಗೆ ಮತ್ತು 50 ಸಾವಿರ ರೂ. ಹೈಕೋರ್ಟ್ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಮುಂದಿನ 2 ವಾರಗಳಲ್ಲಿ ಪಾವತಿಸಬೇಕು. ಹೈಕೋರ್ಟ್ ಆದೇಶ ಪಾಲಿಸಿದ ಬಗ್ಗೆ ಡಿ.16ರಂದು ನ್ಯಾಯಾಲಯಕ್ಕೆ ವಿವರಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ನಗರದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ್ದ ವಕೀಲ ಜಗದೀಶ್ ನ್ಯಾಯಾಲಯದಲ್ಲಿ ವಿಚಾರಣೆಗೆ ಅಡ್ಡಿ ಪಡಿಸಿದ್ದರು. ಅಲ್ಲದೆ, ನ್ಯಾಯಾಲಯದಲ್ಲಿ ಟೇಬಲ್ ಮೇಲೆ ಗುದ್ದಿ ಗದ್ದಲವುಂಟು ಮಾಡಿದ್ದರು. ನ್ಯಾಯಾಧೀಶರು ಹಲವು ಬಾರಿ ಸೂಚನೆ ನೀಡಿದರೂ ಗಲಾಟೆ ಮುಂದುವರಿಸಿದ್ದರು.
ಈ ಕುರಿತಂತೆ ಜಗದೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ ಅವರು ಹೈಕೋರ್ಟ್ ಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ಇದೀಗ ದಂಡ ವಿಧಿಸಿ ಪ್ರಕರಣವನ್ನು ಕೈಬಿಟ್ಟಿದೆ.
The High Court of Karnataka on Tuesday dropped criminal contempt proceedings against an advocate after he tendered an unconditional apology and agreed to pay a fine of ₹ 2 lakh. The HC had initiated the suo moto (taken on its own) proceedings following a ruckus created by K N Jagadeesh at the City Civil and Sessions Court complex.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm