ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm