ಬ್ರೇಕಿಂಗ್ ನ್ಯೂಸ್
12-12-22 01:30 pm HK News Desk ಕರ್ನಾಟಕ
ಹಾಸನ, ಡಿ.12: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಎಂಬಲ್ಲಿ ಸ್ವಿಫ್ಟ್ ಹಾಗೂ ಇನೋವಾ ಕಾರು ಮಧ್ಯೆ ಭೀಕರ ಅಪಘಾತ ನಡೆದಿದ್ದು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದಿಂದ ಬೆಂಗಳೂರಿಗೆ ಮದುವೆಗೆ ತೆರಳಿ ಬರುತ್ತಿದ್ದ ದಂಪತಿ ಸೇರಿ ಮೂವರು ಸಾವು ಕಂಡಿದ್ದಾರೆ.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಹತ್ತು ಗಂಟೆ ವೇಳೆಗೆ ಅಪಘಾತ ನಡೆದಿದೆ. ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದಿದೆ. ಇನೋವಾ ಕಾರಿನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಇನೋವಾ ಕಾರಿನಲ್ಲಿದ್ದ ಹಾಸನ ನಗರದ ದೊಡ್ಡಿ ರಸ್ತೆಯ ಶ್ರೀನಿವಾಸಮೂರ್ತಿ(66), ಜಯಂತಿ (60) ದಂಪತಿ ಹಾಗು ಸಂಬಂಧಿ ಕಾರು ಚಲಾಯಿಸುತ್ತಿದ್ದ ಪ್ರಭಾಕರ್ ಎಂಬವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಸಂಬಂಧ ಬಾಡಿಗೆ ಕಾರಿನಲ್ಲಿ ತೆರಳಿದ್ದ ಕುಟುಂಬ ಹಿಂತಿರುಗಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮದುವೆ ಮುಗಿಸಿ ವಾಪಸ್ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದ ಇನ್ನೋವಾ ಕಾರು, ಆನಂತರ ಎದುರಿನಿಂದ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ.



ಭೀಕರ ಅಪಘಾತದಲ್ಲಿ ಇನ್ನೋವಾದಲ್ಲಿದ್ದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಕಿಶೋರ್ ಮತ್ತು ಇನ್ನೊಬ್ಬರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ಎರಡೂ ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
Five people have been killed and three seriously injured in a head-on collision between two cars on Bengaluru-Mangaluru national highway, near Nagathihalli, in Nagamangala taluk, on Sunday night. Three passengers in the Swift car, from Hassan and two passengers in the Innova car were killed on the spot in the mishap, according to police.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm