ಬ್ರೇಕಿಂಗ್ ನ್ಯೂಸ್
12-12-22 01:30 pm HK News Desk ಕರ್ನಾಟಕ
ಹಾಸನ, ಡಿ.12: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಎಂಬಲ್ಲಿ ಸ್ವಿಫ್ಟ್ ಹಾಗೂ ಇನೋವಾ ಕಾರು ಮಧ್ಯೆ ಭೀಕರ ಅಪಘಾತ ನಡೆದಿದ್ದು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದಿಂದ ಬೆಂಗಳೂರಿಗೆ ಮದುವೆಗೆ ತೆರಳಿ ಬರುತ್ತಿದ್ದ ದಂಪತಿ ಸೇರಿ ಮೂವರು ಸಾವು ಕಂಡಿದ್ದಾರೆ.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಹತ್ತು ಗಂಟೆ ವೇಳೆಗೆ ಅಪಘಾತ ನಡೆದಿದೆ. ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದಿದೆ. ಇನೋವಾ ಕಾರಿನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಇನೋವಾ ಕಾರಿನಲ್ಲಿದ್ದ ಹಾಸನ ನಗರದ ದೊಡ್ಡಿ ರಸ್ತೆಯ ಶ್ರೀನಿವಾಸಮೂರ್ತಿ(66), ಜಯಂತಿ (60) ದಂಪತಿ ಹಾಗು ಸಂಬಂಧಿ ಕಾರು ಚಲಾಯಿಸುತ್ತಿದ್ದ ಪ್ರಭಾಕರ್ ಎಂಬವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಸಂಬಂಧ ಬಾಡಿಗೆ ಕಾರಿನಲ್ಲಿ ತೆರಳಿದ್ದ ಕುಟುಂಬ ಹಿಂತಿರುಗಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮದುವೆ ಮುಗಿಸಿ ವಾಪಸ್ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದ ಇನ್ನೋವಾ ಕಾರು, ಆನಂತರ ಎದುರಿನಿಂದ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ.



ಭೀಕರ ಅಪಘಾತದಲ್ಲಿ ಇನ್ನೋವಾದಲ್ಲಿದ್ದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಕಿಶೋರ್ ಮತ್ತು ಇನ್ನೊಬ್ಬರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ಎರಡೂ ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
Five people have been killed and three seriously injured in a head-on collision between two cars on Bengaluru-Mangaluru national highway, near Nagathihalli, in Nagamangala taluk, on Sunday night. Three passengers in the Swift car, from Hassan and two passengers in the Innova car were killed on the spot in the mishap, according to police.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm