ಬ್ರೇಕಿಂಗ್ ನ್ಯೂಸ್
15-12-22 09:08 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಾದ ಕಲಬುರಗಿ ಜಿಲ್ಲೆಯ ಅಫಜಲಪುರದ ಕಾಂಗ್ರೆಸ್ ಮುಖಂಡ ಆರ್.ಡಿ. ಪಾಟೀಲ ಹಾಗೂ ಆತನ ಸಹೋದರ ಮಹಾಂತೇಶ ಪಾಟೀಲಗೆ ಎಂಟು ತಿಂಗಳ ಬಳಿಕ ಜಾಮೀನು ಸಿಕ್ಕಿದೆ.
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಗುರುವಾರ ಜಾಮೀನು ಮಂಜೂರು ಮಾಡಿದೆ. ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ ಗುರುವಾರ ಆದೇಶ ನೀಡಿದೆ.

ಕಲಬುರಗಿ ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ 2021ರ ಅಕ್ಟೋಬರ್ 3ರಂದು ನಡೆದಿದ್ದ ಪಿಎಸ್ಐ ಪರೀಕ್ಷಾ ನೇಮಕಾತಿ ಹಗರಣದಲ್ಲಿ ಆರ್.ಡಿ. ಪಾಟೀಲ ಮತ್ತು ಮಹಾಂತೇಶ ಪಾಟೀಲ ಪ್ರಮುಖ ಆರೋಪಿಗಳಾಗಿದ್ದರು. ಇವರು ತಮಗೆ ದೊಡ್ಡ ಮೊತ್ತದ ಹಣ ನೀಡಿದ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳಿಸಿ ಪಾಸ್ ಆಗುವಂತೆ ನೋಡಿಕೊಂಡಿದ್ದರು. ಈ ಬಗ್ಗೆ ಕಳೆದ ಏಪ್ರಿಲ್ ತಿಂಗಳಲ್ಲಿ ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆಯಾಗುತ್ತಿದ್ದಂತೆ ಆರ್ ಡಿ. ಪಾಟೀಲ್ ಮತ್ತು ಮಹಾಂತೇಶ ಪಾಟೀಲ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು.
![]()
ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ನೇತೃತ್ವದ ತನಿಖಾ ತಂಡ ಏಪ್ರಿಲ್ 22ರಂದು ಸಾಮೂಹಿಕ ವಿವಾಹದ ಸಿದ್ಧತೆಯಲ್ಲಿದ್ದ ಮಹಾಂತೇಶ ಪಾಟೀಲನನ್ನು ಬಂಧಿಸಿತ್ತು. ಮರುದಿನವೇ ಮಹಾರಾಷ್ಟ್ರದಲ್ಲಿ ಆರ್.ಡಿ. ಪಾಟೀಲನನ್ನೂ ಬಂಧಿಸಲಾಗಿತ್ತು.
ಆನಂತರ ಜಾಮೀನಿಗಾಗಿ ಹಲವಾರು ಪ್ರಯತ್ನ ನಡೆದಿದ್ದರೂ ಜೆಎಂಎಫ್ಸಿ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಸುಮಾರು ಎಂಟು ತಿಂಗಳ ಬಳಿಕ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
Rudragowda Patil, main accused in the malpractice reported in the examination for recruitment of Police Sub-Inspectors (PSIs), who was arrested on April 24, was granted bail by the High Court of Karnataka in Kalaburagi on Thursday. However, Patil is not likely to be released from judicial custody, as he has been granted bail only in one case connected to the Chowk Police Station. Multiple cases have been registered against the accused in different police stations.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm